gold stolen
ಹನೂರು: ನಕಲಿ ಕೀ ಬಳಸಿ ಖದೀಮರು ಮನೆಯ ಬೀರುವಿನಲ್ಲಿದ್ದ ಚಿನ್ನಾಭರಣ ಕದ್ದೊಯ್ದಿರುವ ಘಟನೆ ತಾಲ್ಲೂಕಿನ ಬಸಪ್ಪನದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹದೇವ ಪ್ರಸಾದ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಜೂನ್.7ರಂದು ಬೆಂಗಳೂರಿನಲ್ಲಿ ವಾಸವಾಗಿರುವ ಮಗನ ಮನೆಗೆ ಹೋಗಿದ್ದ ವೇಳೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ನಂತರ ಜೂನ್.12ರಂದು ಮನೆಗೆ ಮರಳಿದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ನಕಲಿ ಕೀ ಬಳಸಿ ಮನೆಯ ಮುಂಭಾಗದ ಬಾಗಿಲ ಬೀಗ ತೆಗೆದು ಒಳ ಪ್ರವೇಶಿಸಿರುವ ಖದೀಮರು, ಬೀರುವಿನ ಬೀಗವನ್ನು ಮುರಿದು 162 ಗ್ರಾಂ ಚಿನ್ನ ಹಾಗೂ 2 ಲಕ್ಷ ನಗದನ್ನು ದೋಚಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ರಾಮಾಪುರ ಠಾಣೆ ಪೊಲೀಸರು ಭೇಟಿ ನೀಡಿ ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಕರೆಯಿಸಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…