ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಪ್ರವಾಸಿಗರಿಗೆ ಹಾಗೂ ಯಾತ್ರಾರ್ಥಿಗಳಿಗೆ ಪರಿಸರ, ವನ್ಯಜೀವಿ ಸಂರಕ್ಷಣೆ ಹಾಗೂ ವನ್ಯ ಪ್ರಾಣಿಗಳ ವೀಕ್ಷಣೆಗಾಗಿ ಉಡುತೊರೆ ಹಳ್ಳ ಜಲಾಶಯ ಕಡೆಯಿಂದ ವನ್ಯಜೀವಿ ಸಪ್ತಾಹ ಪ್ರಯುಕ್ತ ಅಕ್ಟೋಬರ್ 2ರಿಂದ ಸಫಾರಿ ಪ್ರಾರಂಭ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವನ್ಯಜೀವಿ ಪ್ರಿಯರು ಸದ್ಬಳಕೆ ಮಾಡಿಕೊಳ್ಳುವಂತೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಡಾ.ಸಂತೋಷ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಪಿ ಜಿ ಪಾಳ್ಯ ಸಫಾರಿಯನ್ನು ಲೊಕ್ಕನಹಳ್ಳಿ ಕಳೆದ ಡಿಸೆಂಬರ್ ೨ ರಂದು ಪ್ರಾರಂಭ ಮಾಡಲಾಗಿತ್ತು. ಸಫಾರಿ ಕೇಂದ್ರಕ್ಕೆ ಬರುವ ವನ್ಯಜೀವಿ ಪ್ರಿಯರನ್ನು 18 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಂಚರಿಸಿ ವಾಪಸ್ ಬರಲಾಗುತ್ತಿದೆ. ಸಫಾರಿ ಕೇಂದ್ರಕ್ಕೆ ಬಂದಂತಹ ಪ್ರವಾಸಿಗರಿಗೆ ಆನೆ, ಹುಲಿ, ಚಿರತೆ, ಜಿಂಕೆ, ಕಡವೆ, ಕಾಡೆಮ್ಮೆ, ಕರಡಿ, ತೋಳ, ನರಿ ಸೇರಿದಂತೆ ಇನ್ನಿತರ ಪ್ರಾಣಿಗಳು ಕಂಡು ಬಂದಿದೆ. ಇದುವರೆಗೂ ಸುಮಾರು 3 ಸಾವಿರಕ್ಕೂ ಹೆಚ್ಚು ಪ್ರವಾಸಿಗರು, ೪೦೦ಕ್ಕೂ ಎಷ್ಟು ಶಾಲಾ ವಿದ್ಯಾರ್ಥಿಗಳು ಭೇಟಿ ನೀಡಿ ಪ್ರಕೃತಿಯನ್ನು ಆನಂದಿಸಿ ಉತ್ತಮ ಸ್ಪಂದನೆ ನೀಡಿದ್ದಾರೆ.
ಈ ನಿಟ್ಟಿನಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಪ್ರವಾಸಿಗರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕುಡುಕರೆ ಜಲಾಶಯದ ಅರಣ್ಯ ಪ್ರದೇಶದ ಕಡೆಯಿಂದ ಪಿಜಿ ಪಾಳ್ಯ ವನ್ಯಜೀವಿ ವಲಯ ಲೋಕನಹಳ್ಳಿಯವರೆಗೆ ಸಫಾರಿಯನ್ನು ಕೈಗೊಳ್ಳಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರನ್ನು ಅನುಮತಿ ಕೋರಲಾಗಿತ್ತು. ಪಿ ಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಸಫಾರಿಯು ಯಶಸ್ವಿಯಾಗಿರುವುದರಿಂದ ಉಡುತೊರೆ ಹಳ್ಳ ಜಲಾಶಯದ ಅರಣ್ಯ ಪ್ರದೇಶದ ಸಫಾರಿಗೆ ಅನುಮತಿಯನ್ನು ನೀಡಲಾಗಿದೆ.
ಈ ನಿಟ್ಟಿನಲ್ಲಿ ಅಕ್ಟೋಬರ್.2ರಿಂದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕಾವೇರಿ ನೀರಾವರಿ ನಿಗಮ ನಿಯಮಿತ, ಕಬಿನಿ ವಿಭಾಗ ನಂ 4ರವರ ಕಚೇರಿ ಮುಂಭಾಗ ಅಜ್ಜೀಪುರ ಗ್ರಾಮದಿಂದ ಪ್ರಾರಂಭವಾಗಲಿದೆ.
ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಹಾಗೂ ಸಂಜೆ ಮೂರು ರಿಂದ ಆರು ಗಂಟೆಯವರೆಗೆ ಸಫಾರಿ ಇರಲಿದ್ದು ಸಫಾರಿ ಶುಲ್ಕ ವಯಸ್ಕರಿಗೆ 400 ಮಕ್ಕಳಿಗೆ ಇನ್ನೂರು ರೂಪಾಯಿ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9481995505,9481995515,9481995536 ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಲಾಗಿದೆ. ಇ ಮೇಲ್ ವಿಳಾಸ rfohanur123@gmail.com ಸಂಪರ್ಕ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…