ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಪ್ರವಾಸಿಗರಿಗೆ ಮತ್ತೊಂದು ಗುಡ್‌ ನ್ಯೂಸ್‌

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಪ್ರವಾಸಿಗರಿಗೆ ಹಾಗೂ ಯಾತ್ರಾರ್ಥಿಗಳಿಗೆ ಪರಿಸರ, ವನ್ಯಜೀವಿ ಸಂರಕ್ಷಣೆ ಹಾಗೂ ವನ್ಯ ಪ್ರಾಣಿಗಳ ವೀಕ್ಷಣೆಗಾಗಿ ಉಡುತೊರೆ ಹಳ್ಳ ಜಲಾಶಯ ಕಡೆಯಿಂದ ವನ್ಯಜೀವಿ ಸಪ್ತಾಹ ಪ್ರಯುಕ್ತ ಅಕ್ಟೋಬರ್ 2ರಿಂದ ಸಫಾರಿ ಪ್ರಾರಂಭ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವನ್ಯಜೀವಿ ಪ್ರಿಯರು ಸದ್ಬಳಕೆ ಮಾಡಿಕೊಳ್ಳುವಂತೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಡಾ.ಸಂತೋಷ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಪಿ ಜಿ ಪಾಳ್ಯ ಸಫಾರಿಯನ್ನು ಲೊಕ್ಕನಹಳ್ಳಿ ಕಳೆದ ಡಿಸೆಂಬರ್ ೨ ರಂದು ಪ್ರಾರಂಭ ಮಾಡಲಾಗಿತ್ತು. ಸಫಾರಿ ಕೇಂದ್ರಕ್ಕೆ ಬರುವ ವನ್ಯಜೀವಿ ಪ್ರಿಯರನ್ನು 18 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಂಚರಿಸಿ ವಾಪಸ್ ಬರಲಾಗುತ್ತಿದೆ. ಸಫಾರಿ ಕೇಂದ್ರಕ್ಕೆ ಬಂದಂತಹ ಪ್ರವಾಸಿಗರಿಗೆ ಆನೆ, ಹುಲಿ, ಚಿರತೆ, ಜಿಂಕೆ, ಕಡವೆ, ಕಾಡೆಮ್ಮೆ, ಕರಡಿ, ತೋಳ, ನರಿ ಸೇರಿದಂತೆ ಇನ್ನಿತರ ಪ್ರಾಣಿಗಳು ಕಂಡು ಬಂದಿದೆ. ಇದುವರೆಗೂ ಸುಮಾರು 3 ಸಾವಿರಕ್ಕೂ ಹೆಚ್ಚು ಪ್ರವಾಸಿಗರು, ೪೦೦ಕ್ಕೂ ಎಷ್ಟು ಶಾಲಾ ವಿದ್ಯಾರ್ಥಿಗಳು ಭೇಟಿ ನೀಡಿ ಪ್ರಕೃತಿಯನ್ನು ಆನಂದಿಸಿ ಉತ್ತಮ ಸ್ಪಂದನೆ ನೀಡಿದ್ದಾರೆ.

ಈ ನಿಟ್ಟಿನಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಪ್ರವಾಸಿಗರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕುಡುಕರೆ ಜಲಾಶಯದ ಅರಣ್ಯ ಪ್ರದೇಶದ ಕಡೆಯಿಂದ ಪಿಜಿ ಪಾಳ್ಯ ವನ್ಯಜೀವಿ ವಲಯ ಲೋಕನಹಳ್ಳಿಯವರೆಗೆ ಸಫಾರಿಯನ್ನು ಕೈಗೊಳ್ಳಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರನ್ನು ಅನುಮತಿ ಕೋರಲಾಗಿತ್ತು. ಪಿ ಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಸಫಾರಿಯು ಯಶಸ್ವಿಯಾಗಿರುವುದರಿಂದ ಉಡುತೊರೆ ಹಳ್ಳ ಜಲಾಶಯದ ಅರಣ್ಯ ಪ್ರದೇಶದ ಸಫಾರಿಗೆ ಅನುಮತಿಯನ್ನು ನೀಡಲಾಗಿದೆ.

ಈ ನಿಟ್ಟಿನಲ್ಲಿ ಅಕ್ಟೋಬರ್.2ರಿಂದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕಾವೇರಿ ನೀರಾವರಿ ನಿಗಮ ನಿಯಮಿತ, ಕಬಿನಿ ವಿಭಾಗ ನಂ 4ರವರ ಕಚೇರಿ ಮುಂಭಾಗ ಅಜ್ಜೀಪುರ ಗ್ರಾಮದಿಂದ ಪ್ರಾರಂಭವಾಗಲಿದೆ.

ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಹಾಗೂ ಸಂಜೆ ಮೂರು ರಿಂದ ಆರು ಗಂಟೆಯವರೆಗೆ ಸಫಾರಿ ಇರಲಿದ್ದು ಸಫಾರಿ ಶುಲ್ಕ ವಯಸ್ಕರಿಗೆ 400 ಮಕ್ಕಳಿಗೆ ಇನ್ನೂರು ರೂಪಾಯಿ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9481995505,9481995515,9481995536 ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಲಾಗಿದೆ. ಇ ಮೇಲ್ ವಿಳಾಸ rfohanur123@gmail.com ಸಂಪರ್ಕ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago