ಚಾಮರಾಜನಗರ

ವಿದ್ಯುತ್‌ ಕಂಬಕ್ಕೆ ಡಿಕ್ಕಿ : ಗೂಡ್ಸ್‌ ವಾಹನ ಪಲ್ಟಿ

ಹನೂರು : ತಾಲ್ಲೂಕಿನ ಕೌದಳ್ಳಿ ಭದ್ರಯ್ಯನಹಳ್ಳಿ ಮಾರ್ಗ ಮಧ್ಯದ ನಡುವೆ ಗೂಡ್ಸ್ ವಾಹನ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಪಲ್ಟಿಯಾಗಿರುವ ಘಟನೆ ನಡೆದಿದೆ.

ಮಹೇಂದ್ರ ಕಂಪೆನಿಯ ಗೂಡ್ಸ್ ವಾಹನವು ಕೌದಳ್ಳಿ ಮಾರ್ಗದಿಂದ ಭದ್ರಯನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದಾಗ ಚಾಲಕ ಪುಟ್ಟಮಾದಶೆಟ್ಟಿ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಾಹನ ಹಳ್ಳಕ್ಕೆ ಪಲ್ಟಿಯಾಗಿದೆ.

ವಿದ್ಯುತ್ ಕಂಬಕ್ಕೆ ರಭಸವಾಗಿ ಗುದ್ದಿದ ಹಿನ್ನೆಲೆ ವಿದ್ಯುತ್ ಕಂಬ ಸಂಪೂರ್ಣವಾಗಿ ಜಖಂಗೊಂಡಿದ್ದು ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಚಾಲಕ ಪುಟ್ಟಮಾದ ಶೆಟ್ಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು| ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದ ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌…

17 mins ago

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

35 mins ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

1 hour ago

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

2 hours ago

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

2 hours ago

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

6 hours ago