ಹನೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲೆಯಾಳಿ ಸಿನಿಮಾ ಶೂಟಿಂಗ್ (Gopalaswamy Betta film shooting) ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ವಹಿಸಬೇಕು ಎಂದು ಸ್ಥಳೀಯ ರೈತ ಮುಖಂಡರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ದೂರು ನೀಡಿದರು.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಅರಣ್ಯ ನಿಯಮವನ್ನು ಗಾಳಿಗೆ ತೂರಿ ಮಲೆಯಾಳಿ ಸಿನಿಮಾದ ಚಿತ್ರೀಕರಣಕ್ಕೆ ಅಕ್ರಮವಾಗಿ ಅಧಿಕಾರಿಗಳೆ ಅನುಮತಿ ನೀಡಿದ್ದಾರೆ. ಹಾಗಾಗಿ ಕೂಡಲೇ ಅರಣ್ಯ ಇಲಾಖೆ ನೀತಿ ನಿಯಮ ಗಾಳಿಗೆ ತೂರಿದ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು ಎಂದು ಸಿಎಂಸಿದ್ದರಾಮಯ್ಯರವರಿಗೆ ದೂರು ನೀಡಿದರು.
ಇದಲ್ಲದೆ ಚಾಮರಾಜನಗರ ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದ್ದು ಮಾನವ ಸಂಘರ್ಷ ಮಿತಿಮೀರಿದ ಹಾಗಾಗಿ ಸಂಪುಟ ಸಭೆಯ ವೇಳೆ ಕ್ರಮಕೈಗೊಳ್ಳುವಂತೆ ರೈತ ಮುಖಂಡರು ಒತ್ತಾಯಿಸಿದರು.
ಆನ್ಲೈನ್ ಗೇಮ್ ನಿಷೇಧಿಸಿ: ಇಂದಿನ ಯುವ ಪೀಳಿಗೆ ಮೊಬೈಲ್ ನಲ್ಲಿನ ಆನ್ಲೈನ್ ಗೇಮ್ ಗಳ ಕಡೆ ಹೆಚ್ಚಿನ ಗಮನ ವಹಿಸಿರುವುದರಿಂದ ಬೆಟ್ಟಿಂಗ್ ದಂಧೆಗೆ ಸಿಲುಕಿಕೊಂಡು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಆದ್ದರಿಂದ ಆನ್ಲೈನ್ ಗೇಮ್ ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…