ಚಾಮರಾಜನಗರ

ಗೋಪಾಲಸ್ವಾಮಿ ಬೆಟ್ಟದಲ್ಲಿ ಶೂಟಿಂಗ್‌ ಪ್ರಕರಣ: ಮತ್ತೊಂದು ವಿವಾದ ಸೃಷ್ಟಿ

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣಕ್ಕೆ ಅನುಮತಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ವಿವಾದ ಸೃಷ್ಟಿಯಾಗಿದೆ.

ಮಲಯಾಳಂ ಚಿತ್ರದ ಶೂಟಿಂಗ್‌ ವಿವಾದ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಚಿತ್ರೀಕರಣ ನಡೆದ ಸ್ಥಳ ಮುಜರಾಯಿ ಇಲಾಖೆಗೆ ಸೇರಿದ್ದ ಅಥವಾ ಅರಣ್ಯ ಇಲಾಖೆಗೆ ಸೇರಿದ್ದಾ ಎಂಬ ಪ್ರಶ್ನೆ ಎದ್ದಿದೆ.

ನಿನ್ನೆಯಷ್ಟೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಂಡೀಪುರ ಎಸಿಎಫ್‌ ನವೀನ್‌ಕುಮಾರ್‌ ಅವರು, ಚಿತ್ರತಂಡಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ ಸಿಕ್ಕಿದೆ. ಆದರೆ ನಿಯಮ ಉಲ್ಲಂಘಿಸಿದ್ದರೆ ಕಾನೂನು ಕ್ರಮ ಆಗಲಿದೆ ಎಂದು ಹೇಳಿದ್ದರು.

ಆದರೆ ಅರಣ್ಯಾಧಿಕಾರಿಗಳ ಸಾರ್ವಜನಿಕ ಪ್ರಕಟಣೆ ಅನ್ವಯ ಶೂಟಿಂಗ್‌ ನಡೆದಿದ್ದು, ನಿಷೇಧಿತ ಪ್ರದೇಶ ಅಲ್ಲದಿದ್ದರೆ ಅದು ಮುಜರಾಯಿ ಇಲಾಖೆಯ ಸ್ಥಳವೇ ಎಂಬ ಅನುಮಾನ ಹುಟ್ಟಿಸಿದೆ.

ಈ ಬಗ್ಗೆ ಗುಂಡ್ಲುಪೇಟೆ ತಹಶೀಲ್ದಾರ್‌ ರಮೇಶ್‌ ಬಾಬು ಅವರನ್ನು ಕೇಳಿದರೆ ಮುಜರಾಯಿ ಇಲಾಖೆಯಿಂದ ಯಾವುದೇ ಅನುಮತಿ ಕೊಟ್ಟಿಲ್ಲ. ಯಾರೂ ಕೂಡ ನಮ್ಮ ಅನುಮತಿಯನ್ನು ಕೇಳಿಲ್ಲ. ಸದ್ಯ ನಮ್ಮನ್ನು ಎಳೆದು ತರುವ ಪ್ರಯತ್ನವಾಗುತ್ತಿದೆ ಎಂದಿದ್ದಾರೆ.

ಒಟ್ಟಿನಲ್ಲಿ ಅರಣ್ಯ ಇಲಾಖೆ ಯಾರದೋ ಮಾತಿಗೆ ಕಟ್ಟುಬಿದ್ದು ಅನುಮತಿ ನೀಡಿ ಈಗ ವಿವಾದವನ್ನು ಎಳೆದುಕೊಂಡಿದೆ ಎನ್ನಲಾಗುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

5 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

5 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

5 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

5 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

5 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

5 hours ago