ಚಾಮರಾಜನಗರ

ಸಂತೇಮರಳ್ಳಿ: ಸುಲಿಗೆಗೆ ಇಳಿದ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ; ಇಂತಿಂತ ಚಿಕಿತ್ಸೆಗೆ ಇಂತಿಷ್ಟು ಹಣ ವಸೂಲಿ!

ಸಂತೇಮರಳ್ಳಿ: ಕೂಲಿ ಕಾರ್ಮಿಕರು, ರೈತಾಪಿ ವರ್ಗ, ಬಡವರು ಅನಾರೋಗ್ಯಕ್ಕೆ ತುತ್ತಾದ್ರೆ ಅಂಥವರು ನೇರವಾಗಿ ತೆರಳುವುದು ಸ್ಥಳೀಯ ಸರ್ಕಾರಿ ಆಸ್ಪತ್ರೆಗಳಿಗೆ. ಆದರೆ ಅಂತಹ ಸರ್ಕಾರಿ ಆಸ್ಪತ್ರೆಗಳೇ ಬಡ ಜನರ ಹತ್ತಿರ ಹಣ ವಸೂಲಿಗೆ ನಿಂತರೆ ಅವರ ಪಾಡೇನು. ಅದರಲ್ಲೂ ಇಂತಿಂತ ಚಿಕಿತ್ಸೆಗೆ ಇಂತಿಷ್ಟು ಹಣ ಅಂದು ವಸೂಲಿಗೆ ನಿಂತರೆ ಅವರ ಗತಿಯೇನು?

ಹೌದು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ರೋಗಿಗಳಿಂದ ಹಣ ಪಡೆದುಕೊಳ್ಳುವ ಮೂಲಕ ಸುಲಿಗೆಗೆ ಇಳಿದಿದ್ದು, ಅಲ್ಲಿಗೆ ಹೋಗುವ ಸಾರ್ವಜನಿಕರು ಇಂತಿಂತ ಚಿಕಿತ್ಸೆಗೆ ಇಂತಿಷ್ಟು ಹಣ ಕೊಟ್ಟು ಚಿಕಿತ್ಸೆ ಪಡೆಯುವ ಪಾಡು ಎದುರಾಗಿದೆ. ಇಲ್ಲಿನ ಆಸ್ಪತ್ರೆಯಲ್ಲಿ ನಾರ್ಮಲ್ ಡೆಲಿವರಿಗೆ ರೂ.3 ಸಾವಿರ, ಸಿಜೇರಿಯನ್‌ಗೆ ರೂ 20 ಸಾವಿರ, ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ ರೂ.30 ಸಾವಿರ ಅಂತ ಒಂದೊಂದು ಚಿಕಿತ್ಸೆಗೂ ಒಂದೊಂದು ಹಣ ನಿಗದಿಯಾಗಿದೆ.

ಆಶಾ ಕಾರ್ಯಕರ್ತೆಯರು ಆ ಹಣವನ್ನು ಸಂಗ್ರಹಿಸಿ ನರ್ಸ್‌ಗಳಿಗೆ ಕೋಡಬೇಕು. ಬಳಿಕ ವೈದ್ಯಾಧಿಕಾರಿ ರೇಣುಕಾದೇವಿ ಈ ಹಣವನ್ನು ಸಂಗ್ರಹಿಸುತ್ತಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದೇ ರೀತಿ ರಾಣಿ ಎಂಬ ಆಶಾ ಕಾರ್ಯಕರ್ತೆಗೆ ಡೆಲಿವರಿ ರೋಗಿಗಳ ಬಳಿ ರೂ.10 ಸಾವಿರ ಹಣ ವಸೂಲಿ ಮಾಡೋಕೆ ಹೇಳಿದ್ದರು. ಇದಕ್ಕೊಪ್ಪದೇ ಇದ್ದಿದ್ದಕ್ಕೆ ವೈದ್ಯಾಧಿಕಾರಿ ರೇಣುಕಾದೇವಿ ಇಲ್ಲ ಸಲ್ಲದ ಆರೋಪ ಮಾಡಿ ಭ್ರಷ್ಟಚಾರ ವಿರುದ್ಧ ಧ್ವನಿ ಎತ್ತಿದ್ದ ಆಶಾ ಕಾರ್ಯಕರ್ತೆ ರಾಣಿ ವಿರುದ್ಧ ಮೆಮೋ ನೀಡಿದ್ದಾರೆ. ಅಸಲಿಗೆ ಕಾರ್ಯಕರ್ತೆಯರು ಸರ್ಕಾರಿ ನೌಕರರಲ್ಲ. ಅವರಿಗೆ ನೋಟಿಸ್ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಆದರೂ ಸಹ ಮೆಮೋ ನೀಡಿ ಈಗ ವೈದ್ಯಾಧಿಕಾರಿ ರೇಣುಕಾದೇವಿ ಅಡ್ಡಕತ್ತರಿಗೆ ಸಿಲುಕಿದ್ದಾರೆ.

andolana

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

8 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

8 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

9 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

9 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

9 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

9 hours ago