ಚಾಮರಾಜನಗರ

ಸಂತೇಮರಳ್ಳಿ: ಸುಲಿಗೆಗೆ ಇಳಿದ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ; ಇಂತಿಂತ ಚಿಕಿತ್ಸೆಗೆ ಇಂತಿಷ್ಟು ಹಣ ವಸೂಲಿ!

ಸಂತೇಮರಳ್ಳಿ: ಕೂಲಿ ಕಾರ್ಮಿಕರು, ರೈತಾಪಿ ವರ್ಗ, ಬಡವರು ಅನಾರೋಗ್ಯಕ್ಕೆ ತುತ್ತಾದ್ರೆ ಅಂಥವರು ನೇರವಾಗಿ ತೆರಳುವುದು ಸ್ಥಳೀಯ ಸರ್ಕಾರಿ ಆಸ್ಪತ್ರೆಗಳಿಗೆ. ಆದರೆ ಅಂತಹ ಸರ್ಕಾರಿ ಆಸ್ಪತ್ರೆಗಳೇ ಬಡ ಜನರ ಹತ್ತಿರ ಹಣ ವಸೂಲಿಗೆ ನಿಂತರೆ ಅವರ ಪಾಡೇನು. ಅದರಲ್ಲೂ ಇಂತಿಂತ ಚಿಕಿತ್ಸೆಗೆ ಇಂತಿಷ್ಟು ಹಣ ಅಂದು ವಸೂಲಿಗೆ ನಿಂತರೆ ಅವರ ಗತಿಯೇನು?

ಹೌದು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ರೋಗಿಗಳಿಂದ ಹಣ ಪಡೆದುಕೊಳ್ಳುವ ಮೂಲಕ ಸುಲಿಗೆಗೆ ಇಳಿದಿದ್ದು, ಅಲ್ಲಿಗೆ ಹೋಗುವ ಸಾರ್ವಜನಿಕರು ಇಂತಿಂತ ಚಿಕಿತ್ಸೆಗೆ ಇಂತಿಷ್ಟು ಹಣ ಕೊಟ್ಟು ಚಿಕಿತ್ಸೆ ಪಡೆಯುವ ಪಾಡು ಎದುರಾಗಿದೆ. ಇಲ್ಲಿನ ಆಸ್ಪತ್ರೆಯಲ್ಲಿ ನಾರ್ಮಲ್ ಡೆಲಿವರಿಗೆ ರೂ.3 ಸಾವಿರ, ಸಿಜೇರಿಯನ್‌ಗೆ ರೂ 20 ಸಾವಿರ, ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ ರೂ.30 ಸಾವಿರ ಅಂತ ಒಂದೊಂದು ಚಿಕಿತ್ಸೆಗೂ ಒಂದೊಂದು ಹಣ ನಿಗದಿಯಾಗಿದೆ.

ಆಶಾ ಕಾರ್ಯಕರ್ತೆಯರು ಆ ಹಣವನ್ನು ಸಂಗ್ರಹಿಸಿ ನರ್ಸ್‌ಗಳಿಗೆ ಕೋಡಬೇಕು. ಬಳಿಕ ವೈದ್ಯಾಧಿಕಾರಿ ರೇಣುಕಾದೇವಿ ಈ ಹಣವನ್ನು ಸಂಗ್ರಹಿಸುತ್ತಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದೇ ರೀತಿ ರಾಣಿ ಎಂಬ ಆಶಾ ಕಾರ್ಯಕರ್ತೆಗೆ ಡೆಲಿವರಿ ರೋಗಿಗಳ ಬಳಿ ರೂ.10 ಸಾವಿರ ಹಣ ವಸೂಲಿ ಮಾಡೋಕೆ ಹೇಳಿದ್ದರು. ಇದಕ್ಕೊಪ್ಪದೇ ಇದ್ದಿದ್ದಕ್ಕೆ ವೈದ್ಯಾಧಿಕಾರಿ ರೇಣುಕಾದೇವಿ ಇಲ್ಲ ಸಲ್ಲದ ಆರೋಪ ಮಾಡಿ ಭ್ರಷ್ಟಚಾರ ವಿರುದ್ಧ ಧ್ವನಿ ಎತ್ತಿದ್ದ ಆಶಾ ಕಾರ್ಯಕರ್ತೆ ರಾಣಿ ವಿರುದ್ಧ ಮೆಮೋ ನೀಡಿದ್ದಾರೆ. ಅಸಲಿಗೆ ಕಾರ್ಯಕರ್ತೆಯರು ಸರ್ಕಾರಿ ನೌಕರರಲ್ಲ. ಅವರಿಗೆ ನೋಟಿಸ್ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಆದರೂ ಸಹ ಮೆಮೋ ನೀಡಿ ಈಗ ವೈದ್ಯಾಧಿಕಾರಿ ರೇಣುಕಾದೇವಿ ಅಡ್ಡಕತ್ತರಿಗೆ ಸಿಲುಕಿದ್ದಾರೆ.

andolana

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

3 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

3 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

4 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

4 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

4 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

5 hours ago