ಸಂತೇಮರಳ್ಳಿ: ಕೂಲಿ ಕಾರ್ಮಿಕರು, ರೈತಾಪಿ ವರ್ಗ, ಬಡವರು ಅನಾರೋಗ್ಯಕ್ಕೆ ತುತ್ತಾದ್ರೆ ಅಂಥವರು ನೇರವಾಗಿ ತೆರಳುವುದು ಸ್ಥಳೀಯ ಸರ್ಕಾರಿ ಆಸ್ಪತ್ರೆಗಳಿಗೆ. ಆದರೆ ಅಂತಹ ಸರ್ಕಾರಿ ಆಸ್ಪತ್ರೆಗಳೇ ಬಡ ಜನರ ಹತ್ತಿರ ಹಣ ವಸೂಲಿಗೆ ನಿಂತರೆ ಅವರ ಪಾಡೇನು. ಅದರಲ್ಲೂ ಇಂತಿಂತ ಚಿಕಿತ್ಸೆಗೆ ಇಂತಿಷ್ಟು ಹಣ ಅಂದು ವಸೂಲಿಗೆ ನಿಂತರೆ ಅವರ ಗತಿಯೇನು?
ಹೌದು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ರೋಗಿಗಳಿಂದ ಹಣ ಪಡೆದುಕೊಳ್ಳುವ ಮೂಲಕ ಸುಲಿಗೆಗೆ ಇಳಿದಿದ್ದು, ಅಲ್ಲಿಗೆ ಹೋಗುವ ಸಾರ್ವಜನಿಕರು ಇಂತಿಂತ ಚಿಕಿತ್ಸೆಗೆ ಇಂತಿಷ್ಟು ಹಣ ಕೊಟ್ಟು ಚಿಕಿತ್ಸೆ ಪಡೆಯುವ ಪಾಡು ಎದುರಾಗಿದೆ. ಇಲ್ಲಿನ ಆಸ್ಪತ್ರೆಯಲ್ಲಿ ನಾರ್ಮಲ್ ಡೆಲಿವರಿಗೆ ರೂ.3 ಸಾವಿರ, ಸಿಜೇರಿಯನ್ಗೆ ರೂ 20 ಸಾವಿರ, ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ ರೂ.30 ಸಾವಿರ ಅಂತ ಒಂದೊಂದು ಚಿಕಿತ್ಸೆಗೂ ಒಂದೊಂದು ಹಣ ನಿಗದಿಯಾಗಿದೆ.
ಆಶಾ ಕಾರ್ಯಕರ್ತೆಯರು ಆ ಹಣವನ್ನು ಸಂಗ್ರಹಿಸಿ ನರ್ಸ್ಗಳಿಗೆ ಕೋಡಬೇಕು. ಬಳಿಕ ವೈದ್ಯಾಧಿಕಾರಿ ರೇಣುಕಾದೇವಿ ಈ ಹಣವನ್ನು ಸಂಗ್ರಹಿಸುತ್ತಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದೇ ರೀತಿ ರಾಣಿ ಎಂಬ ಆಶಾ ಕಾರ್ಯಕರ್ತೆಗೆ ಡೆಲಿವರಿ ರೋಗಿಗಳ ಬಳಿ ರೂ.10 ಸಾವಿರ ಹಣ ವಸೂಲಿ ಮಾಡೋಕೆ ಹೇಳಿದ್ದರು. ಇದಕ್ಕೊಪ್ಪದೇ ಇದ್ದಿದ್ದಕ್ಕೆ ವೈದ್ಯಾಧಿಕಾರಿ ರೇಣುಕಾದೇವಿ ಇಲ್ಲ ಸಲ್ಲದ ಆರೋಪ ಮಾಡಿ ಭ್ರಷ್ಟಚಾರ ವಿರುದ್ಧ ಧ್ವನಿ ಎತ್ತಿದ್ದ ಆಶಾ ಕಾರ್ಯಕರ್ತೆ ರಾಣಿ ವಿರುದ್ಧ ಮೆಮೋ ನೀಡಿದ್ದಾರೆ. ಅಸಲಿಗೆ ಕಾರ್ಯಕರ್ತೆಯರು ಸರ್ಕಾರಿ ನೌಕರರಲ್ಲ. ಅವರಿಗೆ ನೋಟಿಸ್ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಆದರೂ ಸಹ ಮೆಮೋ ನೀಡಿ ಈಗ ವೈದ್ಯಾಧಿಕಾರಿ ರೇಣುಕಾದೇವಿ ಅಡ್ಡಕತ್ತರಿಗೆ ಸಿಲುಕಿದ್ದಾರೆ.
ಬಿಡದಿ : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು…
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…