ಸಂತೇಮರಳ್ಳಿ: ಕೂಲಿ ಕಾರ್ಮಿಕರು, ರೈತಾಪಿ ವರ್ಗ, ಬಡವರು ಅನಾರೋಗ್ಯಕ್ಕೆ ತುತ್ತಾದ್ರೆ ಅಂಥವರು ನೇರವಾಗಿ ತೆರಳುವುದು ಸ್ಥಳೀಯ ಸರ್ಕಾರಿ ಆಸ್ಪತ್ರೆಗಳಿಗೆ. ಆದರೆ ಅಂತಹ ಸರ್ಕಾರಿ ಆಸ್ಪತ್ರೆಗಳೇ ಬಡ ಜನರ ಹತ್ತಿರ ಹಣ ವಸೂಲಿಗೆ ನಿಂತರೆ ಅವರ ಪಾಡೇನು. ಅದರಲ್ಲೂ ಇಂತಿಂತ ಚಿಕಿತ್ಸೆಗೆ ಇಂತಿಷ್ಟು ಹಣ ಅಂದು ವಸೂಲಿಗೆ ನಿಂತರೆ ಅವರ ಗತಿಯೇನು?
ಹೌದು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ರೋಗಿಗಳಿಂದ ಹಣ ಪಡೆದುಕೊಳ್ಳುವ ಮೂಲಕ ಸುಲಿಗೆಗೆ ಇಳಿದಿದ್ದು, ಅಲ್ಲಿಗೆ ಹೋಗುವ ಸಾರ್ವಜನಿಕರು ಇಂತಿಂತ ಚಿಕಿತ್ಸೆಗೆ ಇಂತಿಷ್ಟು ಹಣ ಕೊಟ್ಟು ಚಿಕಿತ್ಸೆ ಪಡೆಯುವ ಪಾಡು ಎದುರಾಗಿದೆ. ಇಲ್ಲಿನ ಆಸ್ಪತ್ರೆಯಲ್ಲಿ ನಾರ್ಮಲ್ ಡೆಲಿವರಿಗೆ ರೂ.3 ಸಾವಿರ, ಸಿಜೇರಿಯನ್ಗೆ ರೂ 20 ಸಾವಿರ, ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ ರೂ.30 ಸಾವಿರ ಅಂತ ಒಂದೊಂದು ಚಿಕಿತ್ಸೆಗೂ ಒಂದೊಂದು ಹಣ ನಿಗದಿಯಾಗಿದೆ.
ಆಶಾ ಕಾರ್ಯಕರ್ತೆಯರು ಆ ಹಣವನ್ನು ಸಂಗ್ರಹಿಸಿ ನರ್ಸ್ಗಳಿಗೆ ಕೋಡಬೇಕು. ಬಳಿಕ ವೈದ್ಯಾಧಿಕಾರಿ ರೇಣುಕಾದೇವಿ ಈ ಹಣವನ್ನು ಸಂಗ್ರಹಿಸುತ್ತಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದೇ ರೀತಿ ರಾಣಿ ಎಂಬ ಆಶಾ ಕಾರ್ಯಕರ್ತೆಗೆ ಡೆಲಿವರಿ ರೋಗಿಗಳ ಬಳಿ ರೂ.10 ಸಾವಿರ ಹಣ ವಸೂಲಿ ಮಾಡೋಕೆ ಹೇಳಿದ್ದರು. ಇದಕ್ಕೊಪ್ಪದೇ ಇದ್ದಿದ್ದಕ್ಕೆ ವೈದ್ಯಾಧಿಕಾರಿ ರೇಣುಕಾದೇವಿ ಇಲ್ಲ ಸಲ್ಲದ ಆರೋಪ ಮಾಡಿ ಭ್ರಷ್ಟಚಾರ ವಿರುದ್ಧ ಧ್ವನಿ ಎತ್ತಿದ್ದ ಆಶಾ ಕಾರ್ಯಕರ್ತೆ ರಾಣಿ ವಿರುದ್ಧ ಮೆಮೋ ನೀಡಿದ್ದಾರೆ. ಅಸಲಿಗೆ ಕಾರ್ಯಕರ್ತೆಯರು ಸರ್ಕಾರಿ ನೌಕರರಲ್ಲ. ಅವರಿಗೆ ನೋಟಿಸ್ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಆದರೂ ಸಹ ಮೆಮೋ ನೀಡಿ ಈಗ ವೈದ್ಯಾಧಿಕಾರಿ ರೇಣುಕಾದೇವಿ ಅಡ್ಡಕತ್ತರಿಗೆ ಸಿಲುಕಿದ್ದಾರೆ.
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…