ಚಾಮರಾಜನಗರ: ಪಂಚಾಯ್ತಿ ಅಧ್ಯಕ್ಷೆ ಪುತ್ರನೊಬ್ಬ ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ.
ಪೊನ್ನಾಚಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೀಲಾಂಬಿಕೆಯ ಪುತ್ರ ವೈದೇಶ್ ವಿರುದ್ಧ ಸಂತ್ರಸ್ತೆ ಮಹಿಳೆ ದೂರು ನೀಡಿದ್ದಾರೆ. ಆಶ್ರಯ ಮನೆ ಯೋಜನೆಯಡಿ ಮನೆ ಬೇಕೆಂದರೆ ತನ್ನ ಜೊತೆ ಮಲಗುವಂತೆ ಒತ್ತಾಯಿಸುತ್ತಿದ್ದನು ಎಂದು ಸಂತ್ರಸ್ತೆ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನನ್ನ ನಗ್ನ ಫೋಟೊಗಳನ್ನು ಚಿತ್ರೀಸಿಕೊಂಡು ತನ್ನ ಜೊತೆ ಮಲಗದಿದ್ದರೆ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ ನಿರಂತರವಾಗಿ ಅತ್ಯಚಾರ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಇದೀಗ ತನ್ನ ಖಾಸಗಿ ವೀಡಿಯೋವನ್ನು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಮಾಡಲಾಗಿದೆ. ಇದರಿಂದ ಮನನೊಂದ ಮಹಿಳೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಮೇರೆಗೆ ವೈದೇಶ್ ಹಾಗೂ ವೀಡಿಯೋ ವೈರಲ್ ಮಾಡಿದ ಬಸಮಣಿ, ಶಿವಮ್ಮ ಎಂಬುವರ ವಿರುದ್ಧ ಐಪಿಸಿ ಸೆಕ್ಷನ್ 376,384,417,507 ಮತ್ತು ಐಟಿ ಕಾಯ್ದೆ 66(ಇ), 67,67(ಎ) ಅನ್ವಯ ಪ್ರಕರಣ ದಾಖಲು ಮಾಡಲಾಗಿದೆ.
ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…
ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್…
ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…
ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…
ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…