ಚಾಮರಾಜನಗರ

ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪುತ್ರ

ಚಾಮರಾಜನಗರ: ಪಂಚಾಯ್ತಿ ಅಧ್ಯಕ್ಷೆ ಪುತ್ರನೊಬ್ಬ ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ.

ಪೊನ್ನಾಚಿ  ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೀಲಾಂಬಿಕೆಯ ಪುತ್ರ ವೈದೇಶ್‌ ವಿರುದ್ಧ ಸಂತ್ರಸ್ತೆ ಮಹಿಳೆ ದೂರು ನೀಡಿದ್ದಾರೆ. ಆಶ್ರಯ ಮನೆ ಯೋಜನೆಯಡಿ ಮನೆ ಬೇಕೆಂದರೆ ತನ್ನ ಜೊತೆ ಮಲಗುವಂತೆ ಒತ್ತಾಯಿಸುತ್ತಿದ್ದನು ಎಂದು ಸಂತ್ರಸ್ತೆ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನನ್ನ ನಗ್ನ ಫೋಟೊಗಳನ್ನು ಚಿತ್ರೀಸಿಕೊಂಡು ತನ್ನ ಜೊತೆ ಮಲಗದಿದ್ದರೆ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡುವುದಾಗಿ ಬೆದರಿಸಿ ನಿರಂತರವಾಗಿ ಅತ್ಯಚಾರ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಇದೀಗ ತನ್ನ ಖಾಸಗಿ ವೀಡಿಯೋವನ್ನು ಸೋಶಿಯಲ್‌ ಮಿಡಿಯಾದಲ್ಲಿ ವೈರಲ್‌ ಮಾಡಲಾಗಿದೆ. ಇದರಿಂದ ಮನನೊಂದ ಮಹಿಳೆ ಮಹದೇಶ್ವರ ಬೆಟ್ಟ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಮೇರೆಗೆ ವೈದೇಶ್‌ ಹಾಗೂ ವೀಡಿಯೋ ವೈರಲ್‌ ಮಾಡಿದ ಬಸಮಣಿ, ಶಿವಮ್ಮ ಎಂಬುವರ ವಿರುದ್ಧ ಐಪಿಸಿ ಸೆಕ್ಷನ್‌ 376,384,417,507 ಮತ್ತು ಐಟಿ ಕಾಯ್ದೆ 66(ಇ), 67,67(ಎ) ಅನ್ವಯ ಪ್ರಕರಣ ದಾಖಲು ಮಾಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

31 mins ago

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

1 hour ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

1 hour ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

1 hour ago

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

4 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

4 hours ago