ಚಾಮರಾಜನಗರ: ಪಂಚಾಯ್ತಿ ಅಧ್ಯಕ್ಷೆ ಪುತ್ರನೊಬ್ಬ ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ.
ಪೊನ್ನಾಚಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೀಲಾಂಬಿಕೆಯ ಪುತ್ರ ವೈದೇಶ್ ವಿರುದ್ಧ ಸಂತ್ರಸ್ತೆ ಮಹಿಳೆ ದೂರು ನೀಡಿದ್ದಾರೆ. ಆಶ್ರಯ ಮನೆ ಯೋಜನೆಯಡಿ ಮನೆ ಬೇಕೆಂದರೆ ತನ್ನ ಜೊತೆ ಮಲಗುವಂತೆ ಒತ್ತಾಯಿಸುತ್ತಿದ್ದನು ಎಂದು ಸಂತ್ರಸ್ತೆ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನನ್ನ ನಗ್ನ ಫೋಟೊಗಳನ್ನು ಚಿತ್ರೀಸಿಕೊಂಡು ತನ್ನ ಜೊತೆ ಮಲಗದಿದ್ದರೆ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ ನಿರಂತರವಾಗಿ ಅತ್ಯಚಾರ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಇದೀಗ ತನ್ನ ಖಾಸಗಿ ವೀಡಿಯೋವನ್ನು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಮಾಡಲಾಗಿದೆ. ಇದರಿಂದ ಮನನೊಂದ ಮಹಿಳೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಮೇರೆಗೆ ವೈದೇಶ್ ಹಾಗೂ ವೀಡಿಯೋ ವೈರಲ್ ಮಾಡಿದ ಬಸಮಣಿ, ಶಿವಮ್ಮ ಎಂಬುವರ ವಿರುದ್ಧ ಐಪಿಸಿ ಸೆಕ್ಷನ್ 376,384,417,507 ಮತ್ತು ಐಟಿ ಕಾಯ್ದೆ 66(ಇ), 67,67(ಎ) ಅನ್ವಯ ಪ್ರಕರಣ ದಾಖಲು ಮಾಡಲಾಗಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…