ಚಾಮರಾಜನಗರ

ಚಾ ನಗರ ಜಿಲ್ಲೆಯ ವಿವಿಧೆಡೆ ಹಸಿರು ಪಟಾಕಿ ಮಳಿಗೆಗಳು ಪ್ರಾರಂಭ

ಚಾಮರಾಜನಗರ ; ದೀಪಾವಳಿ ಹಬ್ಬದ ನಿಗಧಿತ ಅವಧಿಯಲ್ಲಿ ಮಾತ್ರ ಪಟಾಕಿ ಬಳಕೆ ಮಾಡಬೇಕು. ಅದೂ 125 ಡೆಸಿಬಲ್ ಶಬ್ದದ ಹಸಿರು ಪಟಾಕಿಗಳನ್ನೇ ಬಳಸಬೇಕು ಎಂಬುವಂತೆ ನಿರ್ದೇಶನ ಹಾಗೂ ಸತತ ಮಳೆಯ ನಡುವೆಯೂ ಜಿಲ್ಲೆಯಲ್ಲಿ 25 ಕ್ಕೂ ಹೆಚ್ಚು ಪಟಾಕಿ ಮಾರಾಟ ಮಳಿಗೆಗಳು ಈಗಾಗಲೇ ಆರಂಭಗೊಂಡಿದೆ.

ಬೆಳಕಿನ ಹಬ್ಬ ದೀಪಾವಳಿ ಅ.24 ರಿಂದ 26 ರತನಕ 3ದಿನ ನಡೆಯಲಿದ್ದು ಈ ದಿನಗಳಂದು ರಾತ್ರಿ 8ರಿಂದ 10 ಗಂಟೆ ಒಳಗೆ ಹೆಚ್ಚು ಶಬ್ದ ಹಾಗೂ ಹೊಗೆ ಸೂಸದ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕೆಂದು ಸರ್ವೋಚ್ಚ ನ್ಯಾಯಾಲಯ ನಿರ್ದೇಶನ ನೀಡಿದೆ.

ನಗರಸಭೆ, ಪುರಸಭೆ ಹಾಗೂ ಪಟ್ಟಣಪಂಚಾಯಿತಿ ಗುರುತಿಸಿದ ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಬೇಕಿದೆ.ಪರಿಸರ ಇಲಾಖೆ, ಪೊಲೀಸ್, ಅಗ್ನಿಶಾಮಕಠಾಣೆ, ನಗರ ಸ್ಥಳೀಯ ಸಂಸ್ಥೆ ಅಭಿಪ್ರಾಯವನ್ನು ಕ್ರೋಢಿಕರಿಸಿ ಅಂತಿಮವಾಗಿ ಜಿಲ್ಲಾಧಿಕಾರಿ ಅವರಿಂದ ಪಟಾಕಿ ಮಾರಾಟಕ್ಕೆ ಅನುಮತಿ ನೀಡಲಾಗುತ್ತಿದೆ.

ಗುರುವಾರದವರೆಗೆ ಚಾ.ನಗರದಲ್ಲಿ 9 ಗುಂಡ್ಲುಪೇಟೆ 7 ಕೊಳ್ಳೇಗಾಲ 4
ಯಳಂದೂರು 5 ಮತ್ತು ಹನೂರಿನಲ್ಲಿ 3 ಸೇರಿ ಒಟ್ಟು 28 ಮಳಿಗೆಗಳಿಗೆ ಅನುಮತಿ ನೀಡಲಾಗಿದೆ.

ಪ್ರಾರಂಭ ಆಗುವುದು ಅ.24ರ ನರಕ ಚತುರ್ದಶಿಯಿಂದ. ಅಲ್ಲಿಯವರೆಗೆ ಇನ್ನಷ್ಟು ಮಾರಾಟಗಾರರು ಪಟಾಕಿ ವ್ಯಾಪಾರಕ್ಕೆ ಜಿಲ್ಲಾಧಿಕಾರಿ ಅವರಿಂದ ಅನುಮತಿ ಪಡೆುುಂವ ಸಾಧ್ಯತೆ ಇದೆ.

ಚಾ‌ನಗರದಲ್ಲಿ ಮೆಘಾ ಕಾಂಪ್ಲೆಕ್ಸ್ ಹಿಂಭಾಗ‌ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿಸಲಾಗಿದೆ. ನಿರ್ಜನ ಪ್ರದೇಶದಲ್ಲಿ ವಿಶಾಲ ಇರುವೆಡೆ ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಗೆ ಅಂತರ ಇರುವಂತೆ ತೆರೆಯಲು ಸೂಚಿಸಲಾಗಿದೆ. ಪಟಾಕಿ ರಾಜಧಾನಿ ಎನಿಸಿಕೊಂಡಿರುವ ಶಿವಕಾಶಿ ಸೇರಿದಂತೆ ಎಲ್ಲೆಡೆ ನ್ಯಾಯಾಲಯದ ನಿರ್ದೇಶನದಂತೆ ಹಸಿರು ಪಟಾಕಿ ಪಟಾಕಿಗಳನ್ನೇ ಉತ್ಪಾದಿಸಲಾಗುತ್ತಿದೆ. ಆದರೂ ಎಲ್ಲಾದರೂ ಅನ್ಯ ಪಟಾಕಿ ಕಂಡು ಬಂದರೆ ಅವುಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗುತ್ತದೆ.

ಪಟಾಕಿ ಬಳಕೆಯಿಂದ ಆ ಕ್ಷಣಕ್ಕೆ ಖುಷಿ ಸಿಗಬಹುದು.ಆದರೆ ಅವುಗಳಿಂದ ಉಂಟಾಗುವ ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಪರಿಣಾಮಗಳು ಅಪಾಯಕಾರಿ ಎಂದು ಪರಿಸರವಾದಿಗಳು ಅಭಿಪ್ರಾಯ ಪಟ್ಟಿದ್ದಾರೆ.

andolana

Recent Posts

ಡ್ಯಾಡ್ ಈಸ್‌ ಹೋಂ | ಎಚ್‌ಡಿಕೆ ಎಂಟ್ರಿಗೆ ಡಿಕೆಶಿ, ಸಿದ್ದು ಶಾಕ್‌ ; ಸಂಚಲನ ಮೂಡಿಸುತ್ತಿರುವ AI ವಿಡಿಯೋ

ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…

1 min ago

ಸೋಮನಾಥದಲ್ಲಿ ಶೌರ್ಯ ಯಾತ್ರೆ

ಸೋಮನಾಥ : ಗುಜರಾತ್‌ನ ಗಿರ್‌ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…

7 mins ago

ಮನರೇಗಾ | ಬಹಿರಂಗ ಚರ್ಚೆಗೆ ನಾವು ಸಿದ್ಧ : ಡಿಸಿಎಂ ಡಿಕೆಶಿ

ಬೆಂಗಳೂರು : ಮನರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಅವರು ಯಾವಾಗ ಬೇಕಾದರೂ…

15 mins ago

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಮಹದೇವಪ್ಪ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಭಾನುವಾರ…

57 mins ago

ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆ : ನಿಧಿ ಕಾಯ್ದೆ ಹೇಳೋದೇನು? ಪುರಾತತ್ವಜ್ಞರ ವಾದವೇನು? ಇಲ್ಲಿದೆ ಸಮಗ್ರ ಮಾಹಿತಿ

ಲಕ್ಕುಂಡಿ : ಅದೊಂದು ಐತಿಹಾಸಿಕ ಗ್ರಾಮ. ದೇವಾಲಯಗಳ ಸ್ವರ್ಗ, ಶಿಲ್ಪ ಕಲೆಯ ತೊಟ್ಟಿಲು..... ಅದ್ಭುತ ವಾಸ್ತು ಶಿಲ್ಪ ಕಲೆಗಳನ್ನು ಹೊಂದಿದ…

2 hours ago

ಮೂಲ ಸೌಕರ್ಯ ಸಮಸ್ಯೆ : ಪಾಲಿಕೆ ಆಯುಕ್ತರಿಗೆ ಪತ್ರ ಬರೆದ ಸಂಸದ ಯದುವೀರ್‌

ಮೈಸೂರು : ನಗರದ ಎಲ್ಲ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ದೊರಕಿಸಿಕೊಡಲಾಗುವುದು. ಈ ನಿಟ್ಟಿನಲ್ಲಿ ಸಲ್ಲಿಕೆಯಾಗಿರುವ ಅಹವಾಲುಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು…

3 hours ago