ಚಾಮರಾಜನಗರ

ಚಾ ನಗರ ಜಿಲ್ಲೆಯ ವಿವಿಧೆಡೆ ಹಸಿರು ಪಟಾಕಿ ಮಳಿಗೆಗಳು ಪ್ರಾರಂಭ

ಚಾಮರಾಜನಗರ ; ದೀಪಾವಳಿ ಹಬ್ಬದ ನಿಗಧಿತ ಅವಧಿಯಲ್ಲಿ ಮಾತ್ರ ಪಟಾಕಿ ಬಳಕೆ ಮಾಡಬೇಕು. ಅದೂ 125 ಡೆಸಿಬಲ್ ಶಬ್ದದ ಹಸಿರು ಪಟಾಕಿಗಳನ್ನೇ ಬಳಸಬೇಕು ಎಂಬುವಂತೆ ನಿರ್ದೇಶನ ಹಾಗೂ ಸತತ ಮಳೆಯ ನಡುವೆಯೂ ಜಿಲ್ಲೆಯಲ್ಲಿ 25 ಕ್ಕೂ ಹೆಚ್ಚು ಪಟಾಕಿ ಮಾರಾಟ ಮಳಿಗೆಗಳು ಈಗಾಗಲೇ ಆರಂಭಗೊಂಡಿದೆ.

ಬೆಳಕಿನ ಹಬ್ಬ ದೀಪಾವಳಿ ಅ.24 ರಿಂದ 26 ರತನಕ 3ದಿನ ನಡೆಯಲಿದ್ದು ಈ ದಿನಗಳಂದು ರಾತ್ರಿ 8ರಿಂದ 10 ಗಂಟೆ ಒಳಗೆ ಹೆಚ್ಚು ಶಬ್ದ ಹಾಗೂ ಹೊಗೆ ಸೂಸದ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕೆಂದು ಸರ್ವೋಚ್ಚ ನ್ಯಾಯಾಲಯ ನಿರ್ದೇಶನ ನೀಡಿದೆ.

ನಗರಸಭೆ, ಪುರಸಭೆ ಹಾಗೂ ಪಟ್ಟಣಪಂಚಾಯಿತಿ ಗುರುತಿಸಿದ ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಬೇಕಿದೆ.ಪರಿಸರ ಇಲಾಖೆ, ಪೊಲೀಸ್, ಅಗ್ನಿಶಾಮಕಠಾಣೆ, ನಗರ ಸ್ಥಳೀಯ ಸಂಸ್ಥೆ ಅಭಿಪ್ರಾಯವನ್ನು ಕ್ರೋಢಿಕರಿಸಿ ಅಂತಿಮವಾಗಿ ಜಿಲ್ಲಾಧಿಕಾರಿ ಅವರಿಂದ ಪಟಾಕಿ ಮಾರಾಟಕ್ಕೆ ಅನುಮತಿ ನೀಡಲಾಗುತ್ತಿದೆ.

ಗುರುವಾರದವರೆಗೆ ಚಾ.ನಗರದಲ್ಲಿ 9 ಗುಂಡ್ಲುಪೇಟೆ 7 ಕೊಳ್ಳೇಗಾಲ 4
ಯಳಂದೂರು 5 ಮತ್ತು ಹನೂರಿನಲ್ಲಿ 3 ಸೇರಿ ಒಟ್ಟು 28 ಮಳಿಗೆಗಳಿಗೆ ಅನುಮತಿ ನೀಡಲಾಗಿದೆ.

ಪ್ರಾರಂಭ ಆಗುವುದು ಅ.24ರ ನರಕ ಚತುರ್ದಶಿಯಿಂದ. ಅಲ್ಲಿಯವರೆಗೆ ಇನ್ನಷ್ಟು ಮಾರಾಟಗಾರರು ಪಟಾಕಿ ವ್ಯಾಪಾರಕ್ಕೆ ಜಿಲ್ಲಾಧಿಕಾರಿ ಅವರಿಂದ ಅನುಮತಿ ಪಡೆುುಂವ ಸಾಧ್ಯತೆ ಇದೆ.

ಚಾ‌ನಗರದಲ್ಲಿ ಮೆಘಾ ಕಾಂಪ್ಲೆಕ್ಸ್ ಹಿಂಭಾಗ‌ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿಸಲಾಗಿದೆ. ನಿರ್ಜನ ಪ್ರದೇಶದಲ್ಲಿ ವಿಶಾಲ ಇರುವೆಡೆ ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಗೆ ಅಂತರ ಇರುವಂತೆ ತೆರೆಯಲು ಸೂಚಿಸಲಾಗಿದೆ. ಪಟಾಕಿ ರಾಜಧಾನಿ ಎನಿಸಿಕೊಂಡಿರುವ ಶಿವಕಾಶಿ ಸೇರಿದಂತೆ ಎಲ್ಲೆಡೆ ನ್ಯಾಯಾಲಯದ ನಿರ್ದೇಶನದಂತೆ ಹಸಿರು ಪಟಾಕಿ ಪಟಾಕಿಗಳನ್ನೇ ಉತ್ಪಾದಿಸಲಾಗುತ್ತಿದೆ. ಆದರೂ ಎಲ್ಲಾದರೂ ಅನ್ಯ ಪಟಾಕಿ ಕಂಡು ಬಂದರೆ ಅವುಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗುತ್ತದೆ.

ಪಟಾಕಿ ಬಳಕೆಯಿಂದ ಆ ಕ್ಷಣಕ್ಕೆ ಖುಷಿ ಸಿಗಬಹುದು.ಆದರೆ ಅವುಗಳಿಂದ ಉಂಟಾಗುವ ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಪರಿಣಾಮಗಳು ಅಪಾಯಕಾರಿ ಎಂದು ಪರಿಸರವಾದಿಗಳು ಅಭಿಪ್ರಾಯ ಪಟ್ಟಿದ್ದಾರೆ.

andolana

Recent Posts

ಹಿರಿಯ ಪತ್ರಕರ್ತ ರಾಜಕುಮಾರ್‌ ಬಾಹುಸಾರ್‌ ಇನ್ನಿಲ್ಲ

ಮೈಸೂರು : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಬಾಹುಸಾರ್(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ…

18 mins ago

ಬಹುಮಹಡಿ ಕಟ್ಟಡ, ಮನೆ ನಿರ್ಮಾಣಕ್ಕೆ ಕಡಿವಾಣ ಹಾಕಿ : ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಾಗರಿಕರ ಆಗ್ರಹ

ಮೈಸೂರು : ಚಾಮುಂಡಿ ಬೆಟ್ಟ ಉಳಿಸಿ ಎಂಬ ಆಶಯದಲ್ಲಿ ಹಲವು ಸಂಘಟನೆಗಳು ಹಾಗೂ ನಾಗರಿಕರು ಸೇರಿ ‘ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ’…

1 hour ago

ಬೆಂಗಳೂರು ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂ ಹೂಡಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ…

2 hours ago

ಮೈಸೂರು | ರೈಲಿಗೆ ತಲೆಕೊಟ್ಟು ನಿವೃತ್ತ ಎಎಸ್‌ಐ ಸಾವು

ಮೈಸೂರು : ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕುಕ್ಕರಹಳ್ಳಿ ರೈಲ್ವೆ ಗೇಟ್‌ ಬಳಿ ನಡೆದಿದೆ.ಜ…

2 hours ago

ರಂಜಿತಾ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ : ಕಾಡಿನಲ್ಲಿ ಆರೋಪಿ ಶವ ಪತ್ತೆ!

ಶಿರಸಿ : ಇಲ್ಲಿನ ಯಲ್ಲಾಪುರದಲ್ಲಿ ನಡೆದ ವಿವಾಹಿತೆ ರಂಜಿತಾ ಹತ್ಯೆ ಕೇಸ್‌ಗೆ ಬಿಗ್‌ ಟ್ವೀಸ್ಟ್‌ ಸಿಕ್ಕಿದ್ದು, ಹತ್ಯೆ ಆರೋಪಿ ರಫೀಕ್‌…

2 hours ago

ಸಮುದಾಯದ ಸಂಘಟನೆ ಅಗತ್ಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿಂದುಳಿದವರು ಸಂಘಟಿಸಿದರೆ ಜಾತೀಯತೆಯಾಗುವುದಿಲ್ಲ. ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ ಎಂದು ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ…

3 hours ago