ಚಾಮರಾಜನಗರ

ಚಾ ನಗರ ಜಿಲ್ಲೆಯ ವಿವಿಧೆಡೆ ಹಸಿರು ಪಟಾಕಿ ಮಳಿಗೆಗಳು ಪ್ರಾರಂಭ

ಚಾಮರಾಜನಗರ ; ದೀಪಾವಳಿ ಹಬ್ಬದ ನಿಗಧಿತ ಅವಧಿಯಲ್ಲಿ ಮಾತ್ರ ಪಟಾಕಿ ಬಳಕೆ ಮಾಡಬೇಕು. ಅದೂ 125 ಡೆಸಿಬಲ್ ಶಬ್ದದ ಹಸಿರು ಪಟಾಕಿಗಳನ್ನೇ ಬಳಸಬೇಕು ಎಂಬುವಂತೆ ನಿರ್ದೇಶನ ಹಾಗೂ ಸತತ ಮಳೆಯ ನಡುವೆಯೂ ಜಿಲ್ಲೆಯಲ್ಲಿ 25 ಕ್ಕೂ ಹೆಚ್ಚು ಪಟಾಕಿ ಮಾರಾಟ ಮಳಿಗೆಗಳು ಈಗಾಗಲೇ ಆರಂಭಗೊಂಡಿದೆ.

ಬೆಳಕಿನ ಹಬ್ಬ ದೀಪಾವಳಿ ಅ.24 ರಿಂದ 26 ರತನಕ 3ದಿನ ನಡೆಯಲಿದ್ದು ಈ ದಿನಗಳಂದು ರಾತ್ರಿ 8ರಿಂದ 10 ಗಂಟೆ ಒಳಗೆ ಹೆಚ್ಚು ಶಬ್ದ ಹಾಗೂ ಹೊಗೆ ಸೂಸದ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕೆಂದು ಸರ್ವೋಚ್ಚ ನ್ಯಾಯಾಲಯ ನಿರ್ದೇಶನ ನೀಡಿದೆ.

ನಗರಸಭೆ, ಪುರಸಭೆ ಹಾಗೂ ಪಟ್ಟಣಪಂಚಾಯಿತಿ ಗುರುತಿಸಿದ ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಬೇಕಿದೆ.ಪರಿಸರ ಇಲಾಖೆ, ಪೊಲೀಸ್, ಅಗ್ನಿಶಾಮಕಠಾಣೆ, ನಗರ ಸ್ಥಳೀಯ ಸಂಸ್ಥೆ ಅಭಿಪ್ರಾಯವನ್ನು ಕ್ರೋಢಿಕರಿಸಿ ಅಂತಿಮವಾಗಿ ಜಿಲ್ಲಾಧಿಕಾರಿ ಅವರಿಂದ ಪಟಾಕಿ ಮಾರಾಟಕ್ಕೆ ಅನುಮತಿ ನೀಡಲಾಗುತ್ತಿದೆ.

ಗುರುವಾರದವರೆಗೆ ಚಾ.ನಗರದಲ್ಲಿ 9 ಗುಂಡ್ಲುಪೇಟೆ 7 ಕೊಳ್ಳೇಗಾಲ 4
ಯಳಂದೂರು 5 ಮತ್ತು ಹನೂರಿನಲ್ಲಿ 3 ಸೇರಿ ಒಟ್ಟು 28 ಮಳಿಗೆಗಳಿಗೆ ಅನುಮತಿ ನೀಡಲಾಗಿದೆ.

ಪ್ರಾರಂಭ ಆಗುವುದು ಅ.24ರ ನರಕ ಚತುರ್ದಶಿಯಿಂದ. ಅಲ್ಲಿಯವರೆಗೆ ಇನ್ನಷ್ಟು ಮಾರಾಟಗಾರರು ಪಟಾಕಿ ವ್ಯಾಪಾರಕ್ಕೆ ಜಿಲ್ಲಾಧಿಕಾರಿ ಅವರಿಂದ ಅನುಮತಿ ಪಡೆುುಂವ ಸಾಧ್ಯತೆ ಇದೆ.

ಚಾ‌ನಗರದಲ್ಲಿ ಮೆಘಾ ಕಾಂಪ್ಲೆಕ್ಸ್ ಹಿಂಭಾಗ‌ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿಸಲಾಗಿದೆ. ನಿರ್ಜನ ಪ್ರದೇಶದಲ್ಲಿ ವಿಶಾಲ ಇರುವೆಡೆ ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಗೆ ಅಂತರ ಇರುವಂತೆ ತೆರೆಯಲು ಸೂಚಿಸಲಾಗಿದೆ. ಪಟಾಕಿ ರಾಜಧಾನಿ ಎನಿಸಿಕೊಂಡಿರುವ ಶಿವಕಾಶಿ ಸೇರಿದಂತೆ ಎಲ್ಲೆಡೆ ನ್ಯಾಯಾಲಯದ ನಿರ್ದೇಶನದಂತೆ ಹಸಿರು ಪಟಾಕಿ ಪಟಾಕಿಗಳನ್ನೇ ಉತ್ಪಾದಿಸಲಾಗುತ್ತಿದೆ. ಆದರೂ ಎಲ್ಲಾದರೂ ಅನ್ಯ ಪಟಾಕಿ ಕಂಡು ಬಂದರೆ ಅವುಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗುತ್ತದೆ.

ಪಟಾಕಿ ಬಳಕೆಯಿಂದ ಆ ಕ್ಷಣಕ್ಕೆ ಖುಷಿ ಸಿಗಬಹುದು.ಆದರೆ ಅವುಗಳಿಂದ ಉಂಟಾಗುವ ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಪರಿಣಾಮಗಳು ಅಪಾಯಕಾರಿ ಎಂದು ಪರಿಸರವಾದಿಗಳು ಅಭಿಪ್ರಾಯ ಪಟ್ಟಿದ್ದಾರೆ.

andolana

Recent Posts

ಮುಂದಿನ ಚುನಾವಣೆಯಲ್ಲಿ NDA 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೆ : ನಿಖಿಲ್ ಕುಮಾರಸ್ವಾಮಿ ಭರವಸೆ

ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…

5 hours ago

ಪ್ರತ್ಯೇಕವಾಗಿದ್ದ ದಂಪತಿ ನಡುವೆ ಕಿರಿಕ್ ; ಪತ್ನಿ ಕೊಲೆಯಲ್ಲಿ ಅಂತ್ಯ

ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…

5 hours ago

ಸಿಎಂ ಕ್ಷೇತ್ರದಲ್ಲಿನ ಸಮಸ್ಯೆ ಬಗೆಹರಿಸಿ : ಅಧಿಕಾರಿಗಳಿಗೆ ಯತೀಂದ್ರ ಸೂಚನೆ

ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…

5 hours ago

ಸಂಕ್ರಾಂತಿ ವಿಶೇಷ : ಮೈಸೂರು – ಟ್ಯುಟಿಕಾರನ್‌ ನಡುವೆ ವಿಶೇಷ ರೈಲು

ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್‌ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು…

5 hours ago

ಸಂಶೋಧನೆಗೆ ಸಿಗದ ಪ್ರಾಮುಖ್ಯತೆ : ವಿಶ್ರಾಂತ ಕುಲಪತಿ ರಂಗಪ್ಪ ಬೇಸರ

ಮೈಸೂರು : ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸಂಶೋಧನೆಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ, ಜೊತೆಗೆ ಸಂಶೋಧನೆಗೆ ಕಡಿಮೆ ಹಣವನ್ನು ವೆಚ್ಚ…

5 hours ago

ಆಹಾರದ ಮಹತ್ವ ಕುರಿತು ಅರಿವು ಅಗತ್ಯ : ಕೃಷಿ ಸಚಿವ.ಚಲುವರಾಯಸ್ವಾಮಿ

ಮಂಡ್ಯ : ಆಹಾರದ ಮಹತ್ವ ಹೆಚ್ಚಿದೆ. ಎಲ್ಲರೂ ಆಹಾರದ ಮಹತ್ವದ ಕುರಿತು ತಿಳಿದುಕೊಳ್ಳಬೇಕು. 30-40 ವರ್ಷಗಳ ಹಿಂದೆ ಭಾರತ ಆಹಾರದ…

6 hours ago