ಚಾಮರಾಜನಗರ

ಚಾ ನಗರ ಜಿಲ್ಲೆಯ ವಿವಿಧೆಡೆ ಹಸಿರು ಪಟಾಕಿ ಮಳಿಗೆಗಳು ಪ್ರಾರಂಭ

ಚಾಮರಾಜನಗರ ; ದೀಪಾವಳಿ ಹಬ್ಬದ ನಿಗಧಿತ ಅವಧಿಯಲ್ಲಿ ಮಾತ್ರ ಪಟಾಕಿ ಬಳಕೆ ಮಾಡಬೇಕು. ಅದೂ 125 ಡೆಸಿಬಲ್ ಶಬ್ದದ ಹಸಿರು ಪಟಾಕಿಗಳನ್ನೇ ಬಳಸಬೇಕು ಎಂಬುವಂತೆ ನಿರ್ದೇಶನ ಹಾಗೂ ಸತತ ಮಳೆಯ ನಡುವೆಯೂ ಜಿಲ್ಲೆಯಲ್ಲಿ 25 ಕ್ಕೂ ಹೆಚ್ಚು ಪಟಾಕಿ ಮಾರಾಟ ಮಳಿಗೆಗಳು ಈಗಾಗಲೇ ಆರಂಭಗೊಂಡಿದೆ.

ಬೆಳಕಿನ ಹಬ್ಬ ದೀಪಾವಳಿ ಅ.24 ರಿಂದ 26 ರತನಕ 3ದಿನ ನಡೆಯಲಿದ್ದು ಈ ದಿನಗಳಂದು ರಾತ್ರಿ 8ರಿಂದ 10 ಗಂಟೆ ಒಳಗೆ ಹೆಚ್ಚು ಶಬ್ದ ಹಾಗೂ ಹೊಗೆ ಸೂಸದ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕೆಂದು ಸರ್ವೋಚ್ಚ ನ್ಯಾಯಾಲಯ ನಿರ್ದೇಶನ ನೀಡಿದೆ.

ನಗರಸಭೆ, ಪುರಸಭೆ ಹಾಗೂ ಪಟ್ಟಣಪಂಚಾಯಿತಿ ಗುರುತಿಸಿದ ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಬೇಕಿದೆ.ಪರಿಸರ ಇಲಾಖೆ, ಪೊಲೀಸ್, ಅಗ್ನಿಶಾಮಕಠಾಣೆ, ನಗರ ಸ್ಥಳೀಯ ಸಂಸ್ಥೆ ಅಭಿಪ್ರಾಯವನ್ನು ಕ್ರೋಢಿಕರಿಸಿ ಅಂತಿಮವಾಗಿ ಜಿಲ್ಲಾಧಿಕಾರಿ ಅವರಿಂದ ಪಟಾಕಿ ಮಾರಾಟಕ್ಕೆ ಅನುಮತಿ ನೀಡಲಾಗುತ್ತಿದೆ.

ಗುರುವಾರದವರೆಗೆ ಚಾ.ನಗರದಲ್ಲಿ 9 ಗುಂಡ್ಲುಪೇಟೆ 7 ಕೊಳ್ಳೇಗಾಲ 4
ಯಳಂದೂರು 5 ಮತ್ತು ಹನೂರಿನಲ್ಲಿ 3 ಸೇರಿ ಒಟ್ಟು 28 ಮಳಿಗೆಗಳಿಗೆ ಅನುಮತಿ ನೀಡಲಾಗಿದೆ.

ಪ್ರಾರಂಭ ಆಗುವುದು ಅ.24ರ ನರಕ ಚತುರ್ದಶಿಯಿಂದ. ಅಲ್ಲಿಯವರೆಗೆ ಇನ್ನಷ್ಟು ಮಾರಾಟಗಾರರು ಪಟಾಕಿ ವ್ಯಾಪಾರಕ್ಕೆ ಜಿಲ್ಲಾಧಿಕಾರಿ ಅವರಿಂದ ಅನುಮತಿ ಪಡೆುುಂವ ಸಾಧ್ಯತೆ ಇದೆ.

ಚಾ‌ನಗರದಲ್ಲಿ ಮೆಘಾ ಕಾಂಪ್ಲೆಕ್ಸ್ ಹಿಂಭಾಗ‌ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿಸಲಾಗಿದೆ. ನಿರ್ಜನ ಪ್ರದೇಶದಲ್ಲಿ ವಿಶಾಲ ಇರುವೆಡೆ ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಗೆ ಅಂತರ ಇರುವಂತೆ ತೆರೆಯಲು ಸೂಚಿಸಲಾಗಿದೆ. ಪಟಾಕಿ ರಾಜಧಾನಿ ಎನಿಸಿಕೊಂಡಿರುವ ಶಿವಕಾಶಿ ಸೇರಿದಂತೆ ಎಲ್ಲೆಡೆ ನ್ಯಾಯಾಲಯದ ನಿರ್ದೇಶನದಂತೆ ಹಸಿರು ಪಟಾಕಿ ಪಟಾಕಿಗಳನ್ನೇ ಉತ್ಪಾದಿಸಲಾಗುತ್ತಿದೆ. ಆದರೂ ಎಲ್ಲಾದರೂ ಅನ್ಯ ಪಟಾಕಿ ಕಂಡು ಬಂದರೆ ಅವುಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗುತ್ತದೆ.

ಪಟಾಕಿ ಬಳಕೆಯಿಂದ ಆ ಕ್ಷಣಕ್ಕೆ ಖುಷಿ ಸಿಗಬಹುದು.ಆದರೆ ಅವುಗಳಿಂದ ಉಂಟಾಗುವ ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಪರಿಣಾಮಗಳು ಅಪಾಯಕಾರಿ ಎಂದು ಪರಿಸರವಾದಿಗಳು ಅಭಿಪ್ರಾಯ ಪಟ್ಟಿದ್ದಾರೆ.

andolana

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

5 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

5 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

5 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

6 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

6 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

6 hours ago