ಚಾಮರಾಜನಗರ

ಚಾ ನಗರ ಜಿಲ್ಲೆಯ ವಿವಿಧೆಡೆ ಹಸಿರು ಪಟಾಕಿ ಮಳಿಗೆಗಳು ಪ್ರಾರಂಭ

ಚಾಮರಾಜನಗರ ; ದೀಪಾವಳಿ ಹಬ್ಬದ ನಿಗಧಿತ ಅವಧಿಯಲ್ಲಿ ಮಾತ್ರ ಪಟಾಕಿ ಬಳಕೆ ಮಾಡಬೇಕು. ಅದೂ 125 ಡೆಸಿಬಲ್ ಶಬ್ದದ ಹಸಿರು ಪಟಾಕಿಗಳನ್ನೇ ಬಳಸಬೇಕು ಎಂಬುವಂತೆ ನಿರ್ದೇಶನ ಹಾಗೂ ಸತತ ಮಳೆಯ ನಡುವೆಯೂ ಜಿಲ್ಲೆಯಲ್ಲಿ 25 ಕ್ಕೂ ಹೆಚ್ಚು ಪಟಾಕಿ ಮಾರಾಟ ಮಳಿಗೆಗಳು ಈಗಾಗಲೇ ಆರಂಭಗೊಂಡಿದೆ.

ಬೆಳಕಿನ ಹಬ್ಬ ದೀಪಾವಳಿ ಅ.24 ರಿಂದ 26 ರತನಕ 3ದಿನ ನಡೆಯಲಿದ್ದು ಈ ದಿನಗಳಂದು ರಾತ್ರಿ 8ರಿಂದ 10 ಗಂಟೆ ಒಳಗೆ ಹೆಚ್ಚು ಶಬ್ದ ಹಾಗೂ ಹೊಗೆ ಸೂಸದ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕೆಂದು ಸರ್ವೋಚ್ಚ ನ್ಯಾಯಾಲಯ ನಿರ್ದೇಶನ ನೀಡಿದೆ.

ನಗರಸಭೆ, ಪುರಸಭೆ ಹಾಗೂ ಪಟ್ಟಣಪಂಚಾಯಿತಿ ಗುರುತಿಸಿದ ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಬೇಕಿದೆ.ಪರಿಸರ ಇಲಾಖೆ, ಪೊಲೀಸ್, ಅಗ್ನಿಶಾಮಕಠಾಣೆ, ನಗರ ಸ್ಥಳೀಯ ಸಂಸ್ಥೆ ಅಭಿಪ್ರಾಯವನ್ನು ಕ್ರೋಢಿಕರಿಸಿ ಅಂತಿಮವಾಗಿ ಜಿಲ್ಲಾಧಿಕಾರಿ ಅವರಿಂದ ಪಟಾಕಿ ಮಾರಾಟಕ್ಕೆ ಅನುಮತಿ ನೀಡಲಾಗುತ್ತಿದೆ.

ಗುರುವಾರದವರೆಗೆ ಚಾ.ನಗರದಲ್ಲಿ 9 ಗುಂಡ್ಲುಪೇಟೆ 7 ಕೊಳ್ಳೇಗಾಲ 4
ಯಳಂದೂರು 5 ಮತ್ತು ಹನೂರಿನಲ್ಲಿ 3 ಸೇರಿ ಒಟ್ಟು 28 ಮಳಿಗೆಗಳಿಗೆ ಅನುಮತಿ ನೀಡಲಾಗಿದೆ.

ಪ್ರಾರಂಭ ಆಗುವುದು ಅ.24ರ ನರಕ ಚತುರ್ದಶಿಯಿಂದ. ಅಲ್ಲಿಯವರೆಗೆ ಇನ್ನಷ್ಟು ಮಾರಾಟಗಾರರು ಪಟಾಕಿ ವ್ಯಾಪಾರಕ್ಕೆ ಜಿಲ್ಲಾಧಿಕಾರಿ ಅವರಿಂದ ಅನುಮತಿ ಪಡೆುುಂವ ಸಾಧ್ಯತೆ ಇದೆ.

ಚಾ‌ನಗರದಲ್ಲಿ ಮೆಘಾ ಕಾಂಪ್ಲೆಕ್ಸ್ ಹಿಂಭಾಗ‌ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿಸಲಾಗಿದೆ. ನಿರ್ಜನ ಪ್ರದೇಶದಲ್ಲಿ ವಿಶಾಲ ಇರುವೆಡೆ ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಗೆ ಅಂತರ ಇರುವಂತೆ ತೆರೆಯಲು ಸೂಚಿಸಲಾಗಿದೆ. ಪಟಾಕಿ ರಾಜಧಾನಿ ಎನಿಸಿಕೊಂಡಿರುವ ಶಿವಕಾಶಿ ಸೇರಿದಂತೆ ಎಲ್ಲೆಡೆ ನ್ಯಾಯಾಲಯದ ನಿರ್ದೇಶನದಂತೆ ಹಸಿರು ಪಟಾಕಿ ಪಟಾಕಿಗಳನ್ನೇ ಉತ್ಪಾದಿಸಲಾಗುತ್ತಿದೆ. ಆದರೂ ಎಲ್ಲಾದರೂ ಅನ್ಯ ಪಟಾಕಿ ಕಂಡು ಬಂದರೆ ಅವುಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗುತ್ತದೆ.

ಪಟಾಕಿ ಬಳಕೆಯಿಂದ ಆ ಕ್ಷಣಕ್ಕೆ ಖುಷಿ ಸಿಗಬಹುದು.ಆದರೆ ಅವುಗಳಿಂದ ಉಂಟಾಗುವ ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಪರಿಣಾಮಗಳು ಅಪಾಯಕಾರಿ ಎಂದು ಪರಿಸರವಾದಿಗಳು ಅಭಿಪ್ರಾಯ ಪಟ್ಟಿದ್ದಾರೆ.

andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

9 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

10 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago