ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳ ಬಿಳಿಗಿರಿರಂಗನಬೆಟ್ಟಕ್ಕೆ ಹೋಗುವ ವಾಹನ ಸವಾರರಿಂದ ಹಸಿರು ಸುಂಕ ಸಂಗ್ರಹಿಸಲು ಅರಣ್ಯ ಇಲಾಖೆ ಆರಂಭಿಸಲಾಗಿದ್ದು, 2024ರ ಜನವರಿ.1 ರಂದು ಹಸಿರು ಸುಂಕ ಸಂಗ್ರಹಿಸಲಾಗುತ್ತಿದ್ದು, ದ್ವಿಚಕ್ರವಾಹನಹಳಿಗೆ 10, ನಾಲ್ಕು ಚಕ್ರದ ವಾಹನಗಳಿಗೆ 20 ನಿಗದಿ ಪಡಿಸಲಾಗಿದೆ.
ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದ ಒಳಗಡೆ ನೆಲೆಸಿರುವವರಿಗೆ ಸುಂಕದಿಂದ ವಿನಾಯಿತಿ ಇದೆ. ಕೆಎಸ್ಆರ್ಟಿಸಿ ಬಸ್, ಅಂಬುಲೆನ್ಸ್ ಸೇರಿದಂತೆ ತುರ್ತು ವಾಹನಗಳಿಗೂ ವಿನಾಯಿತಿ ನೀಡಲಾಗಿದೆ.
‘ಪ್ರಾಯೋಗಿಕವಾಗಿ ಸುಂಕವನ್ನು ಸಂಗ್ರಹಿಸಲಾಗುತ್ತಿದ್ದು, ಹಣವನ್ನು ಅರಣ್ಯ ಸಂರಕ್ಷಣೆ ಹಾಗೂ ಸಂರಕ್ಷಿತ ವ್ಯಾಪ್ತಿಯ ಗಿರಿಜನರಿಗೆ ಅನುಕೂಲ ಕಲ್ಪಿಸುವ ಕಾರ್ಯಗಳಿಗೆ ಬಳಸಲಾಗುವುದು’ ಎಂದು ಬಿಆರ್ಟಿ ಹುಲಿ ಸಂರಕ್ಷಿತ ನಿರ್ದೇಶಕಿ ಹಾಗೂ ಡಿಸಿಎಫ್ ದೀಪ್ ಜೆ.ಕಾಂಟ್ರ್ಯಾಕ್ಟರ್ ತಿಳಿಸಿದ್ದಾರೆ.
ಯಳಂದೂರು ಮತ್ತು ಚಾಮರಾಜನಗರ ಮಾರ್ಗವಾಗಿ ಬೆಟ್ಟಕ್ಕೆ ಹೋಗಬಹುದಾಗಿದ್ದು, ಯಳಂದೂರು ಮಾರ್ಗದಲ್ಲಿ ಗುಂಬಳ್ಳಿಯಲ್ಲಿ ಮತ್ತು ಚಾಮರಾಜನಗರ ಮಾರ್ಗದಲ್ಲಿ ಹೊಂಡರಬಾಳುವಿನಲ್ಲಿ ಚೆಕ್ಪೋಸ್ಟ್ಗಳಿವೆ. ಅರಣ್ಯ ಪ್ರವೇಶಿಸುವುದಕ್ಕೂ ಮೊದಲು ಜನರು ತಮ್ಮ ವಿವರಗಳನ್ನು ದಾಖಲು ಮಾಡುವ ವ್ಯವಸ್ಥೆ ಈ ಹಿಂದೆಯೇ ಜಾರಿಯಲ್ಲಿತ್ತು. ಈಗ ಹಸಿರು ಶುಲ್ಕವನ್ನೂ ಪಡೆಯಲಾಗುವುದು.
ಬಂಡೀಪುರ ನಾಗರಹೊಳೆಗೆ ಹೋಲಿಸಿದರೆ ಬಿಆರ್ಟಿಯಲ್ಲಿ ಪರಿಸರ ಸ್ನೇಹಿ ಪ್ರವಾಸೋದ್ಯಮದಿಂದ ಸಂಗ್ರಹವಾಗುವ ಆದಾಯ ಕಡಿಮೆ. ಹಸಿರು ಸುಂಕ ಸಂಗ್ರಹಿಸಿದರೆ ಅಗತ್ಯವಿದ್ದಷ್ಟು ತಾತ್ಕಾಲಿಕ ಸಿಬ್ಬಂದಿಯನ್ನು ನೇಮಿಸುವುದರ ಜೊತೆಗೆ ಇಲಾಖೆಯ ಇನ್ನಿತರ ವೆಚ್ಚ ಭರಿಸಲು ಸಹಕಾರಿಯಾಗಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…