ಚಾಮರಾಜನಗರ

ಬಿಳಿಗಿರಿರಂಗನಬೆಟ್ಟದಲ್ಲಿ ಇನ್ಮುಂದೆ ವಾಹನಗಳಿಗೆ ಹಸಿರು ಸುಂಕ

ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳ ಬಿಳಿಗಿರಿರಂಗನಬೆಟ್ಟಕ್ಕೆ ಹೋಗುವ ವಾಹನ ಸವಾರರಿಂದ ಹಸಿರು ಸುಂಕ ಸಂಗ್ರಹಿಸಲು ಅರಣ್ಯ ಇಲಾಖೆ ಆರಂಭಿಸಲಾಗಿದ್ದು, 2024ರ ಜನವರಿ.1 ರಂದು ಹಸಿರು ಸುಂಕ ಸಂಗ್ರಹಿಸಲಾಗುತ್ತಿದ್ದು, ದ್ವಿಚಕ್ರವಾಹನಹಳಿಗೆ 10, ನಾಲ್ಕು ಚಕ್ರದ ವಾಹನಗಳಿಗೆ 20 ನಿಗದಿ ಪಡಿಸಲಾಗಿದೆ.

ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ ಒಳಗಡೆ ನೆಲೆಸಿರುವವರಿಗೆ ಸುಂಕದಿಂದ ವಿನಾಯಿತಿ ಇದೆ. ಕೆಎಸ್‌ಆರ್‌ಟಿಸಿ ಬಸ್, ಅಂಬುಲೆನ್ಸ್ ಸೇರಿದಂತೆ ತುರ್ತು ವಾಹನಗಳಿಗೂ ವಿನಾಯಿತಿ ನೀಡಲಾಗಿದೆ.

‘ಪ್ರಾಯೋಗಿಕವಾಗಿ ಸುಂಕವನ್ನು ಸಂಗ್ರಹಿಸಲಾಗುತ್ತಿದ್ದು, ಹಣವನ್ನು ಅರಣ್ಯ ಸಂರಕ್ಷಣೆ ಹಾಗೂ ಸಂರಕ್ಷಿತ ವ್ಯಾಪ್ತಿಯ ಗಿರಿಜನರಿಗೆ ಅನುಕೂಲ ಕಲ್ಪಿಸುವ ಕಾರ್ಯಗಳಿಗೆ ಬಳಸಲಾಗುವುದು’ ಎಂದು ಬಿಆರ್‌ಟಿ ಹುಲಿ ಸಂರಕ್ಷಿತ ನಿರ್ದೇಶಕಿ ಹಾಗೂ ಡಿಸಿಎಫ್ ದೀಪ್ ಜೆ.ಕಾಂಟ್ರ್ಯಾಕ್ಟರ್ ತಿಳಿಸಿದ್ದಾರೆ.

ಯಳಂದೂರು ಮತ್ತು ಚಾಮರಾಜನಗರ ಮಾರ್ಗವಾಗಿ ಬೆಟ್ಟಕ್ಕೆ ಹೋಗಬಹುದಾಗಿದ್ದು, ಯಳಂದೂರು ಮಾರ್ಗದಲ್ಲಿ ಗುಂಬಳ್ಳಿಯಲ್ಲಿ ಮತ್ತು ಚಾಮರಾಜನಗರ ಮಾರ್ಗದಲ್ಲಿ ಹೊಂಡರಬಾಳುವಿನಲ್ಲಿ ಚೆಕ್‌ಪೋಸ್ಟ್‌ಗಳಿವೆ. ಅರಣ್ಯ ಪ್ರವೇಶಿಸುವುದಕ್ಕೂ ಮೊದಲು ಜನರು ತಮ್ಮ ವಿವರಗಳನ್ನು ದಾಖಲು ಮಾಡುವ ವ್ಯವಸ್ಥೆ ಈ ಹಿಂದೆಯೇ ಜಾರಿಯಲ್ಲಿತ್ತು. ಈಗ ಹಸಿರು ಶುಲ್ಕವನ್ನೂ ಪಡೆಯಲಾಗುವುದು.

ಬಂಡೀಪುರ ನಾಗರಹೊಳೆಗೆ ಹೋಲಿಸಿದರೆ ಬಿಆರ್‌ಟಿಯಲ್ಲಿ ಪರಿಸರ ಸ್ನೇಹಿ ಪ್ರವಾಸೋದ್ಯಮದಿಂದ ಸಂಗ್ರಹವಾಗುವ ಆದಾಯ ಕಡಿಮೆ. ಹಸಿರು ಸುಂಕ ಸಂಗ್ರಹಿಸಿದರೆ ಅಗತ್ಯವಿದ್ದಷ್ಟು ತಾತ್ಕಾಲಿಕ ಸಿಬ್ಬಂದಿಯನ್ನು ನೇಮಿಸುವುದರ ಜೊತೆಗೆ ಇಲಾಖೆಯ ಇನ್ನಿತರ ವೆಚ್ಚ ಭರಿಸಲು ಸಹಕಾರಿಯಾಗಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

andolanait

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

3 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

5 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

6 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

7 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

11 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

11 hours ago