ಚಾಮರಾಜನಗರ

ಬಿಳಿಗಿರಿರಂಗನಬೆಟ್ಟದಲ್ಲಿ ಇನ್ಮುಂದೆ ವಾಹನಗಳಿಗೆ ಹಸಿರು ಸುಂಕ

ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳ ಬಿಳಿಗಿರಿರಂಗನಬೆಟ್ಟಕ್ಕೆ ಹೋಗುವ ವಾಹನ ಸವಾರರಿಂದ ಹಸಿರು ಸುಂಕ ಸಂಗ್ರಹಿಸಲು ಅರಣ್ಯ ಇಲಾಖೆ ಆರಂಭಿಸಲಾಗಿದ್ದು, 2024ರ ಜನವರಿ.1 ರಂದು ಹಸಿರು ಸುಂಕ ಸಂಗ್ರಹಿಸಲಾಗುತ್ತಿದ್ದು, ದ್ವಿಚಕ್ರವಾಹನಹಳಿಗೆ 10, ನಾಲ್ಕು ಚಕ್ರದ ವಾಹನಗಳಿಗೆ 20 ನಿಗದಿ ಪಡಿಸಲಾಗಿದೆ.

ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ ಒಳಗಡೆ ನೆಲೆಸಿರುವವರಿಗೆ ಸುಂಕದಿಂದ ವಿನಾಯಿತಿ ಇದೆ. ಕೆಎಸ್‌ಆರ್‌ಟಿಸಿ ಬಸ್, ಅಂಬುಲೆನ್ಸ್ ಸೇರಿದಂತೆ ತುರ್ತು ವಾಹನಗಳಿಗೂ ವಿನಾಯಿತಿ ನೀಡಲಾಗಿದೆ.

‘ಪ್ರಾಯೋಗಿಕವಾಗಿ ಸುಂಕವನ್ನು ಸಂಗ್ರಹಿಸಲಾಗುತ್ತಿದ್ದು, ಹಣವನ್ನು ಅರಣ್ಯ ಸಂರಕ್ಷಣೆ ಹಾಗೂ ಸಂರಕ್ಷಿತ ವ್ಯಾಪ್ತಿಯ ಗಿರಿಜನರಿಗೆ ಅನುಕೂಲ ಕಲ್ಪಿಸುವ ಕಾರ್ಯಗಳಿಗೆ ಬಳಸಲಾಗುವುದು’ ಎಂದು ಬಿಆರ್‌ಟಿ ಹುಲಿ ಸಂರಕ್ಷಿತ ನಿರ್ದೇಶಕಿ ಹಾಗೂ ಡಿಸಿಎಫ್ ದೀಪ್ ಜೆ.ಕಾಂಟ್ರ್ಯಾಕ್ಟರ್ ತಿಳಿಸಿದ್ದಾರೆ.

ಯಳಂದೂರು ಮತ್ತು ಚಾಮರಾಜನಗರ ಮಾರ್ಗವಾಗಿ ಬೆಟ್ಟಕ್ಕೆ ಹೋಗಬಹುದಾಗಿದ್ದು, ಯಳಂದೂರು ಮಾರ್ಗದಲ್ಲಿ ಗುಂಬಳ್ಳಿಯಲ್ಲಿ ಮತ್ತು ಚಾಮರಾಜನಗರ ಮಾರ್ಗದಲ್ಲಿ ಹೊಂಡರಬಾಳುವಿನಲ್ಲಿ ಚೆಕ್‌ಪೋಸ್ಟ್‌ಗಳಿವೆ. ಅರಣ್ಯ ಪ್ರವೇಶಿಸುವುದಕ್ಕೂ ಮೊದಲು ಜನರು ತಮ್ಮ ವಿವರಗಳನ್ನು ದಾಖಲು ಮಾಡುವ ವ್ಯವಸ್ಥೆ ಈ ಹಿಂದೆಯೇ ಜಾರಿಯಲ್ಲಿತ್ತು. ಈಗ ಹಸಿರು ಶುಲ್ಕವನ್ನೂ ಪಡೆಯಲಾಗುವುದು.

ಬಂಡೀಪುರ ನಾಗರಹೊಳೆಗೆ ಹೋಲಿಸಿದರೆ ಬಿಆರ್‌ಟಿಯಲ್ಲಿ ಪರಿಸರ ಸ್ನೇಹಿ ಪ್ರವಾಸೋದ್ಯಮದಿಂದ ಸಂಗ್ರಹವಾಗುವ ಆದಾಯ ಕಡಿಮೆ. ಹಸಿರು ಸುಂಕ ಸಂಗ್ರಹಿಸಿದರೆ ಅಗತ್ಯವಿದ್ದಷ್ಟು ತಾತ್ಕಾಲಿಕ ಸಿಬ್ಬಂದಿಯನ್ನು ನೇಮಿಸುವುದರ ಜೊತೆಗೆ ಇಲಾಖೆಯ ಇನ್ನಿತರ ವೆಚ್ಚ ಭರಿಸಲು ಸಹಕಾರಿಯಾಗಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

andolanait

Recent Posts

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

29 mins ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

52 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

1 hour ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

2 hours ago

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…

2 hours ago

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

3 hours ago