ಚಾಮರಾಜನಗರ

ಬಿಳಿಗಿರಿರಂಗನಬೆಟ್ಟದಲ್ಲಿ ಇನ್ಮುಂದೆ ವಾಹನಗಳಿಗೆ ಹಸಿರು ಸುಂಕ

ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳ ಬಿಳಿಗಿರಿರಂಗನಬೆಟ್ಟಕ್ಕೆ ಹೋಗುವ ವಾಹನ ಸವಾರರಿಂದ ಹಸಿರು ಸುಂಕ ಸಂಗ್ರಹಿಸಲು ಅರಣ್ಯ ಇಲಾಖೆ ಆರಂಭಿಸಲಾಗಿದ್ದು, 2024ರ ಜನವರಿ.1 ರಂದು ಹಸಿರು ಸುಂಕ ಸಂಗ್ರಹಿಸಲಾಗುತ್ತಿದ್ದು, ದ್ವಿಚಕ್ರವಾಹನಹಳಿಗೆ 10, ನಾಲ್ಕು ಚಕ್ರದ ವಾಹನಗಳಿಗೆ 20 ನಿಗದಿ ಪಡಿಸಲಾಗಿದೆ.

ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ ಒಳಗಡೆ ನೆಲೆಸಿರುವವರಿಗೆ ಸುಂಕದಿಂದ ವಿನಾಯಿತಿ ಇದೆ. ಕೆಎಸ್‌ಆರ್‌ಟಿಸಿ ಬಸ್, ಅಂಬುಲೆನ್ಸ್ ಸೇರಿದಂತೆ ತುರ್ತು ವಾಹನಗಳಿಗೂ ವಿನಾಯಿತಿ ನೀಡಲಾಗಿದೆ.

‘ಪ್ರಾಯೋಗಿಕವಾಗಿ ಸುಂಕವನ್ನು ಸಂಗ್ರಹಿಸಲಾಗುತ್ತಿದ್ದು, ಹಣವನ್ನು ಅರಣ್ಯ ಸಂರಕ್ಷಣೆ ಹಾಗೂ ಸಂರಕ್ಷಿತ ವ್ಯಾಪ್ತಿಯ ಗಿರಿಜನರಿಗೆ ಅನುಕೂಲ ಕಲ್ಪಿಸುವ ಕಾರ್ಯಗಳಿಗೆ ಬಳಸಲಾಗುವುದು’ ಎಂದು ಬಿಆರ್‌ಟಿ ಹುಲಿ ಸಂರಕ್ಷಿತ ನಿರ್ದೇಶಕಿ ಹಾಗೂ ಡಿಸಿಎಫ್ ದೀಪ್ ಜೆ.ಕಾಂಟ್ರ್ಯಾಕ್ಟರ್ ತಿಳಿಸಿದ್ದಾರೆ.

ಯಳಂದೂರು ಮತ್ತು ಚಾಮರಾಜನಗರ ಮಾರ್ಗವಾಗಿ ಬೆಟ್ಟಕ್ಕೆ ಹೋಗಬಹುದಾಗಿದ್ದು, ಯಳಂದೂರು ಮಾರ್ಗದಲ್ಲಿ ಗುಂಬಳ್ಳಿಯಲ್ಲಿ ಮತ್ತು ಚಾಮರಾಜನಗರ ಮಾರ್ಗದಲ್ಲಿ ಹೊಂಡರಬಾಳುವಿನಲ್ಲಿ ಚೆಕ್‌ಪೋಸ್ಟ್‌ಗಳಿವೆ. ಅರಣ್ಯ ಪ್ರವೇಶಿಸುವುದಕ್ಕೂ ಮೊದಲು ಜನರು ತಮ್ಮ ವಿವರಗಳನ್ನು ದಾಖಲು ಮಾಡುವ ವ್ಯವಸ್ಥೆ ಈ ಹಿಂದೆಯೇ ಜಾರಿಯಲ್ಲಿತ್ತು. ಈಗ ಹಸಿರು ಶುಲ್ಕವನ್ನೂ ಪಡೆಯಲಾಗುವುದು.

ಬಂಡೀಪುರ ನಾಗರಹೊಳೆಗೆ ಹೋಲಿಸಿದರೆ ಬಿಆರ್‌ಟಿಯಲ್ಲಿ ಪರಿಸರ ಸ್ನೇಹಿ ಪ್ರವಾಸೋದ್ಯಮದಿಂದ ಸಂಗ್ರಹವಾಗುವ ಆದಾಯ ಕಡಿಮೆ. ಹಸಿರು ಸುಂಕ ಸಂಗ್ರಹಿಸಿದರೆ ಅಗತ್ಯವಿದ್ದಷ್ಟು ತಾತ್ಕಾಲಿಕ ಸಿಬ್ಬಂದಿಯನ್ನು ನೇಮಿಸುವುದರ ಜೊತೆಗೆ ಇಲಾಖೆಯ ಇನ್ನಿತರ ವೆಚ್ಚ ಭರಿಸಲು ಸಹಕಾರಿಯಾಗಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

andolanait

Recent Posts

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

7 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

25 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

31 mins ago

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

1 day ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

1 day ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

1 day ago