ಚಾಮರಾಜನಗರ

ವಹಿವಾಟು ಮೀರಿದರೆ ಜಿಎಸ್‌ಟಿ ನೋಂದಣಿ ಕಡ್ಡಾಯ

ಚಾಮರಾಜನಗರ : ಸರಕು ಮತ್ತು ಸೇವಾ ತೆರಿಗೆ ವಹಿವಾಟು ವಾರ್ಷಿಕವಾಗಿ 40 ಲಕ್ಷ ರೂ (ಸರಕಿಗೆ), 20 ಲಕ್ಷ (ಸೇವೆಗೆ) ದಾಟಿದರೆ ಕಡ್ಡಾಯವಾಗಿ ನೋಂದಣಿ ಪಡೆದು ವ್ಯವಹರಿಸಬೇಕೆಂದು ವಾಣಿಜ್ಯ ತೆರಿಗೆ ಉಪ ಆಯುಕ್ತರಾದ ರಾಘವೇಂದ್ರ ಸುಣಗಾರ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಜಿಲ್ಲಾ ಲೆಕ್ಕ ಪರಿಶೋಧಕರ ಸಂಘ ಮತ್ತು ವಾಣಿಜ್ಯ ತೆರಿಗೆ ಇಲಾಖೆ ಸಹಯೋಗದಲ್ಲಿ ನಡೆದ ಜಿಎಸ್‌ಟಿ ನೋಂದಣಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಂದು ದೇಶ ಒಂದು ತೆರಿಗೆ ಕಲ್ಪನೆಯಲ್ಲಿ ಬಂದ ಸರಕು ಮತ್ತು ಸೇವಾ ತೆರಿಗೆ ಕಾನೂನು ತುಂಬ ಸರಳ ಮತ್ತು ಸುಲಭವಾಗಿದೆ. ದೇಶದ ಅಭಿವೃದ್ಧಿಗೆ ಜಿ.ಎಸ್.ಟಿಯು ಪೂರಕವಾಗಿದೆ. ಜಿ.ಎಸ್.ಟಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಬೇಕಾದರೆ ಸ್ಥಳಿಯ ವಾಣಿಜ್ಯ ತೆರಿಗೆ ಇಲಾಖೆ ಸಂರ್ಪಕಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲೆಕ್ಕ ಪರಿಶೋಧಕ ಸಂಘದ ಜಿಲ್ಲಾಧ್ಯಕ್ಷರಾದ ಸಿ.ಎಂ.ವೆಂಕಟೇಶ್, ಜಿ.ಎಸ್.ಟಿ.ಯಲ್ಲಿ ಎಲ್ಲಾ ವಸ್ತುಗಳು ತೆರಿಗೆ ವ್ಯಾಪ್ತಿಗೆ ಒಳಪಡುವುದಿಲ್ಲ, ಮುಖ್ಯವಾಗಿ ಹಾಲು, ಹಣ್ಣುಗಳು, ತಾಜಾ ತರಕಾರಿ, ಮಾಂಸ ಮುಂತಾದವುಗಳಿಗೆ ಜಿ.ಎಸ್.ಟಿ. ಇಲ್ಲ ಎಂದರು.

ವಾಣಿಜ್ಯ ತೆರಿಗೆ ಇಲಾಖೆಯವರು ನೀಡಿದ ನೋಟಿಸ್ ಅಥವ ಇಂಟಿಮೇಷನ್‌ಗಳಿಗೆ ಉತ್ತರ ನೀಡದಿದ್ದರೆ ಮುಂದೆ ತೊಂದರೆಗೆ ಸಿಲುಕ ಬೇಕಾಗುತ್ತದೆ. ಆದ್ದರಿಂದ ನೋಟಿಸ್‌ಗೆ ಮರು ಉತ್ತರ ನೀಡಬೇಕಾದುದು ಆದ್ಯ ಕರ್ತವ್ಯವಾಗಿದೆ ಎಂದರು. ವಾಣಿಜ್ಯ ತೆರಿಗೆ ಅಧಿಕಾರಿಗಳಾದ ಸುಪ್ರಿತ್‌ದೇವ್, ಚಂದ್ರಶೇಖರ್, ಮಂಜುಕುಮಾರ್, ನಾಗರಾಜು ಲೆಕ್ಕ ಪರಿಶೋಧಕರಾದ ಬಿ.ಎಂ.ಪುಟ್ಟಮಾದಪ್ಪ, ಕಾರ್ಯದರ್ಶಿ ಮಂಜು, ಶ್ರೀಧರ್, ನವೀನ್, ಕಮಲ್‌ರಾಜ್, ಚಂದ್ರು, ರಂಗನಾಥ್, ಶಿವರಾಜು, ಕಾಮರಾಜು, ಮಣಿಕಂಠಸ್ವಾಮಿ, ರಂಗಸ್ವಾಮಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಪ್ರವಾಸಿ ಮಹಿಳೆ ನಾಪತ್ತೆ

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…

3 hours ago

ಓದುಗರ ಪತ್ರ: ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ

ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…

3 hours ago

ಓದುಗರ ಪತ್ರ: ಮರುಪರಿಶೀಲನೆ ಅತ್ಯಗತ್ಯ

ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…

3 hours ago

ಬಸ್‌ನಲ್ಲಿ ಚಿನ್ನಾಭರಣ ಕಳವು

೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮…

3 hours ago

ಮೈಸೂರು ಡಿಸಿ ಬಂಧನಕ್ಕೆ ವಾರಂಟ್

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

3 hours ago