gst chamaraj nagar
ಚಾಮರಾಜನಗರ : ಸರಕು ಮತ್ತು ಸೇವಾ ತೆರಿಗೆ ವಹಿವಾಟು ವಾರ್ಷಿಕವಾಗಿ 40 ಲಕ್ಷ ರೂ (ಸರಕಿಗೆ), 20 ಲಕ್ಷ (ಸೇವೆಗೆ) ದಾಟಿದರೆ ಕಡ್ಡಾಯವಾಗಿ ನೋಂದಣಿ ಪಡೆದು ವ್ಯವಹರಿಸಬೇಕೆಂದು ವಾಣಿಜ್ಯ ತೆರಿಗೆ ಉಪ ಆಯುಕ್ತರಾದ ರಾಘವೇಂದ್ರ ಸುಣಗಾರ ತಿಳಿಸಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ಜಿಲ್ಲಾ ಲೆಕ್ಕ ಪರಿಶೋಧಕರ ಸಂಘ ಮತ್ತು ವಾಣಿಜ್ಯ ತೆರಿಗೆ ಇಲಾಖೆ ಸಹಯೋಗದಲ್ಲಿ ನಡೆದ ಜಿಎಸ್ಟಿ ನೋಂದಣಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಂದು ದೇಶ ಒಂದು ತೆರಿಗೆ ಕಲ್ಪನೆಯಲ್ಲಿ ಬಂದ ಸರಕು ಮತ್ತು ಸೇವಾ ತೆರಿಗೆ ಕಾನೂನು ತುಂಬ ಸರಳ ಮತ್ತು ಸುಲಭವಾಗಿದೆ. ದೇಶದ ಅಭಿವೃದ್ಧಿಗೆ ಜಿ.ಎಸ್.ಟಿಯು ಪೂರಕವಾಗಿದೆ. ಜಿ.ಎಸ್.ಟಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಬೇಕಾದರೆ ಸ್ಥಳಿಯ ವಾಣಿಜ್ಯ ತೆರಿಗೆ ಇಲಾಖೆ ಸಂರ್ಪಕಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲೆಕ್ಕ ಪರಿಶೋಧಕ ಸಂಘದ ಜಿಲ್ಲಾಧ್ಯಕ್ಷರಾದ ಸಿ.ಎಂ.ವೆಂಕಟೇಶ್, ಜಿ.ಎಸ್.ಟಿ.ಯಲ್ಲಿ ಎಲ್ಲಾ ವಸ್ತುಗಳು ತೆರಿಗೆ ವ್ಯಾಪ್ತಿಗೆ ಒಳಪಡುವುದಿಲ್ಲ, ಮುಖ್ಯವಾಗಿ ಹಾಲು, ಹಣ್ಣುಗಳು, ತಾಜಾ ತರಕಾರಿ, ಮಾಂಸ ಮುಂತಾದವುಗಳಿಗೆ ಜಿ.ಎಸ್.ಟಿ. ಇಲ್ಲ ಎಂದರು.
ವಾಣಿಜ್ಯ ತೆರಿಗೆ ಇಲಾಖೆಯವರು ನೀಡಿದ ನೋಟಿಸ್ ಅಥವ ಇಂಟಿಮೇಷನ್ಗಳಿಗೆ ಉತ್ತರ ನೀಡದಿದ್ದರೆ ಮುಂದೆ ತೊಂದರೆಗೆ ಸಿಲುಕ ಬೇಕಾಗುತ್ತದೆ. ಆದ್ದರಿಂದ ನೋಟಿಸ್ಗೆ ಮರು ಉತ್ತರ ನೀಡಬೇಕಾದುದು ಆದ್ಯ ಕರ್ತವ್ಯವಾಗಿದೆ ಎಂದರು. ವಾಣಿಜ್ಯ ತೆರಿಗೆ ಅಧಿಕಾರಿಗಳಾದ ಸುಪ್ರಿತ್ದೇವ್, ಚಂದ್ರಶೇಖರ್, ಮಂಜುಕುಮಾರ್, ನಾಗರಾಜು ಲೆಕ್ಕ ಪರಿಶೋಧಕರಾದ ಬಿ.ಎಂ.ಪುಟ್ಟಮಾದಪ್ಪ, ಕಾರ್ಯದರ್ಶಿ ಮಂಜು, ಶ್ರೀಧರ್, ನವೀನ್, ಕಮಲ್ರಾಜ್, ಚಂದ್ರು, ರಂಗನಾಥ್, ಶಿವರಾಜು, ಕಾಮರಾಜು, ಮಣಿಕಂಠಸ್ವಾಮಿ, ರಂಗಸ್ವಾಮಿ ಹಾಜರಿದ್ದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…