ಚಾಮರಾಜನಗರ

ವಹಿವಾಟು ಮೀರಿದರೆ ಜಿಎಸ್‌ಟಿ ನೋಂದಣಿ ಕಡ್ಡಾಯ

ಚಾಮರಾಜನಗರ : ಸರಕು ಮತ್ತು ಸೇವಾ ತೆರಿಗೆ ವಹಿವಾಟು ವಾರ್ಷಿಕವಾಗಿ 40 ಲಕ್ಷ ರೂ (ಸರಕಿಗೆ), 20 ಲಕ್ಷ (ಸೇವೆಗೆ) ದಾಟಿದರೆ ಕಡ್ಡಾಯವಾಗಿ ನೋಂದಣಿ ಪಡೆದು ವ್ಯವಹರಿಸಬೇಕೆಂದು ವಾಣಿಜ್ಯ ತೆರಿಗೆ ಉಪ ಆಯುಕ್ತರಾದ ರಾಘವೇಂದ್ರ ಸುಣಗಾರ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಜಿಲ್ಲಾ ಲೆಕ್ಕ ಪರಿಶೋಧಕರ ಸಂಘ ಮತ್ತು ವಾಣಿಜ್ಯ ತೆರಿಗೆ ಇಲಾಖೆ ಸಹಯೋಗದಲ್ಲಿ ನಡೆದ ಜಿಎಸ್‌ಟಿ ನೋಂದಣಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಂದು ದೇಶ ಒಂದು ತೆರಿಗೆ ಕಲ್ಪನೆಯಲ್ಲಿ ಬಂದ ಸರಕು ಮತ್ತು ಸೇವಾ ತೆರಿಗೆ ಕಾನೂನು ತುಂಬ ಸರಳ ಮತ್ತು ಸುಲಭವಾಗಿದೆ. ದೇಶದ ಅಭಿವೃದ್ಧಿಗೆ ಜಿ.ಎಸ್.ಟಿಯು ಪೂರಕವಾಗಿದೆ. ಜಿ.ಎಸ್.ಟಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಬೇಕಾದರೆ ಸ್ಥಳಿಯ ವಾಣಿಜ್ಯ ತೆರಿಗೆ ಇಲಾಖೆ ಸಂರ್ಪಕಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲೆಕ್ಕ ಪರಿಶೋಧಕ ಸಂಘದ ಜಿಲ್ಲಾಧ್ಯಕ್ಷರಾದ ಸಿ.ಎಂ.ವೆಂಕಟೇಶ್, ಜಿ.ಎಸ್.ಟಿ.ಯಲ್ಲಿ ಎಲ್ಲಾ ವಸ್ತುಗಳು ತೆರಿಗೆ ವ್ಯಾಪ್ತಿಗೆ ಒಳಪಡುವುದಿಲ್ಲ, ಮುಖ್ಯವಾಗಿ ಹಾಲು, ಹಣ್ಣುಗಳು, ತಾಜಾ ತರಕಾರಿ, ಮಾಂಸ ಮುಂತಾದವುಗಳಿಗೆ ಜಿ.ಎಸ್.ಟಿ. ಇಲ್ಲ ಎಂದರು.

ವಾಣಿಜ್ಯ ತೆರಿಗೆ ಇಲಾಖೆಯವರು ನೀಡಿದ ನೋಟಿಸ್ ಅಥವ ಇಂಟಿಮೇಷನ್‌ಗಳಿಗೆ ಉತ್ತರ ನೀಡದಿದ್ದರೆ ಮುಂದೆ ತೊಂದರೆಗೆ ಸಿಲುಕ ಬೇಕಾಗುತ್ತದೆ. ಆದ್ದರಿಂದ ನೋಟಿಸ್‌ಗೆ ಮರು ಉತ್ತರ ನೀಡಬೇಕಾದುದು ಆದ್ಯ ಕರ್ತವ್ಯವಾಗಿದೆ ಎಂದರು. ವಾಣಿಜ್ಯ ತೆರಿಗೆ ಅಧಿಕಾರಿಗಳಾದ ಸುಪ್ರಿತ್‌ದೇವ್, ಚಂದ್ರಶೇಖರ್, ಮಂಜುಕುಮಾರ್, ನಾಗರಾಜು ಲೆಕ್ಕ ಪರಿಶೋಧಕರಾದ ಬಿ.ಎಂ.ಪುಟ್ಟಮಾದಪ್ಪ, ಕಾರ್ಯದರ್ಶಿ ಮಂಜು, ಶ್ರೀಧರ್, ನವೀನ್, ಕಮಲ್‌ರಾಜ್, ಚಂದ್ರು, ರಂಗನಾಥ್, ಶಿವರಾಜು, ಕಾಮರಾಜು, ಮಣಿಕಂಠಸ್ವಾಮಿ, ರಂಗಸ್ವಾಮಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

8 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

11 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

12 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

14 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

14 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

16 hours ago