ಚಾಮರಾಜನಗರ: ತಮಿಳುನಾಡಿನ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಜಿಲ್ಲೆಯಾದ್ಯಂತ ಶುಕ್ರವಾರ ಜಿಟಿಜಿಟಿ ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಬೆಳಿಗ್ಗೆ 10 ಗಂಟೆಗೆ ಶುರುವಾದ ತುಂತುರು ಮಳೆ ಸಂಜೆವರೆಗೂ ಒಂದೇ ಸಮನೆ ಬಿದ್ದಿತು. 5 ಗಂಟೆಯಲ್ಲಿ ನಿಂತಿದ್ದು ದಟ್ಟ ಮೋಡಕವಿದ ಶೀತವಾತಾವರಣ ಆವರಿಸಿತ್ತು.
ಮಳೆಯಿಂದ ಬೀದಿಬದಿ ಮತ್ತು ತಳ್ಳುಗಾಡಿ ವ್ಯಾಪಾರ ಸಂಪೂರ್ಣ ಸ್ಥಬ್ಧ ವಾಗಿತ್ತು. ಜನತೆ ರೈನ್ ಕೋಟ್, ಛತ್ರಿ ಅವಲಂಬಿಸಿ ಹೊರಬರಬೇಕಾಯಿತು. ರಸ್ತೆಗಳಲ್ಲಿ ನೀರು ಹರಿದಾಡಿತು. ಹೇಳಿಕೊಳ್ಳುವಂತಹ ಜನರಿಲ್ಲದೆ ಎಲ್ಲಾ ರೀತಿಯ ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀರಿತು.ಇನ್ನು ಗ್ರಾಮೀಣ ಭಾಗದಲ್ಲಿ ಕೃಷಿಚಟುವಟಿಕೆಗಳಿಗೆ ತೊಂದರೆ ಆಯಿತು. ಕುರಿ, ಮೇಕೆ ಹಾಗೂ ದನಕರುಗಳನ್ನು ಮೇಲೂ ಬಿಡಲಾಗದೆ ಒಳಗೂ ಕಟ್ಟಲಾಗದೆ ಇಕ್ಕಟ್ಟಿನ ಪರಿಸ್ಥಿತಿ ಎದುರಿಸುವಂತಾಯಿತು.ಹಸಿಕಡಲೆ, ಜೋಳ, ರಾಗಿ, ಹುರುಳಿ, ಕೊತ್ತಂಬರಿ, ಭತ್ತ, ಮುಸುಕಿನಜೋಳ ಮೊದಲಾದ ಬೆಳೆಗಳು ವಿವಿಧ ಹಂತದಲ್ಲಿವೆ. ಈ ಬೆಳೆಗಳು ಕಟಾವು ಹಂತದಲ್ಲಿ ಇಲ್ಲದಿರುವುದರಿಂದ ಮಳೆಯಿಂದ ಯಾವುದೇ ಸಮಸ್ಯೆ ಇಲ್ಲ ಎನ್ನುತ್ತಾರೆ ಕೃಷಿ ಇಲಾಖೆ ಆಧಿಕಾರಿಗಳು. ಆದರೆ ಸತತವಾಗಿ ಜೋರುಮಳೆ ಹಿಡಿದರೆ ಕೊತ್ತಂಬರಿ ಬೆಳವಣಿಗೆ ಕುಂಠಿತವಾಗುವ ಅಪಾಯವಿದೆ. ಇನ್ನು ಅರಿಶಿನ ಮತ್ತು ಭತ್ತಕ್ಕೆ ವಿಶೇಷವಾಗಿ ತರಕಾರಿ ಬೆಳೆಗಳಿಗೆ ರೋಗ ರುಜಿನ ಬಾಧಿಸುವ ಸಾಧ್ಯತೆ ಇದೆ. ಆದ್ದರಿಂದ ಮುನ್ನೆಚ್ಚರಿಕೆ ವಹಿಸಬೇಕು ಎಂಬುದು ಕೃಷಿ ತಜ್ಞರ ಅಭಿಪ್ರಾಯ.
ಜಿಟಿ ಮಳೆಯಿಂದ ಕೃಷಿ ಬೆಳೆಗಳಿಗೆ ಅಂತಹ ಸಮಸ್ಯೆ ಇಲ್ಲ. ಕೊಯ್ಲಿಗೆ ಬಂದಿರುವ ಬೆಳೆಗಳಿದ್ದರೆ ತೊಂದರೆಯಾಗುತ್ತಿತ್ತು.
-ಮಧುಸೂದನ್, ಜಂಟಿ ಕೃಷಿ ನಿರ್ದೇಶಕ.
ಮಳೆ ಬಿರುಸಾಗುವ ಮುನ್ಸೂಚನೆ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ಮಳೆ ಇನ್ನೂ ಜಾಸ್ತಿಯಾಗುವ ಸಂಭವವಿದೆ. ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರದವರೆಗೂ ಮಳೆ ಬೀಳುವ ಮುನ್ಸೂಚನೆ ಇದೆ.
-ಎಚ್.ಕೆ.ರಜತ್, ಕೃಷಿ ಹವಾಮಾನ ತಜ್ಞ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…