ಚಾಮರಾಜನಗರ: ತಮಿಳುನಾಡಿನ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಜಿಲ್ಲೆಯಾದ್ಯಂತ ಶುಕ್ರವಾರ ಜಿಟಿಜಿಟಿ ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಬೆಳಿಗ್ಗೆ 10 ಗಂಟೆಗೆ ಶುರುವಾದ ತುಂತುರು ಮಳೆ ಸಂಜೆವರೆಗೂ ಒಂದೇ ಸಮನೆ ಬಿದ್ದಿತು. 5 ಗಂಟೆಯಲ್ಲಿ ನಿಂತಿದ್ದು ದಟ್ಟ ಮೋಡಕವಿದ ಶೀತವಾತಾವರಣ ಆವರಿಸಿತ್ತು.
ಮಳೆಯಿಂದ ಬೀದಿಬದಿ ಮತ್ತು ತಳ್ಳುಗಾಡಿ ವ್ಯಾಪಾರ ಸಂಪೂರ್ಣ ಸ್ಥಬ್ಧ ವಾಗಿತ್ತು. ಜನತೆ ರೈನ್ ಕೋಟ್, ಛತ್ರಿ ಅವಲಂಬಿಸಿ ಹೊರಬರಬೇಕಾಯಿತು. ರಸ್ತೆಗಳಲ್ಲಿ ನೀರು ಹರಿದಾಡಿತು. ಹೇಳಿಕೊಳ್ಳುವಂತಹ ಜನರಿಲ್ಲದೆ ಎಲ್ಲಾ ರೀತಿಯ ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀರಿತು.ಇನ್ನು ಗ್ರಾಮೀಣ ಭಾಗದಲ್ಲಿ ಕೃಷಿಚಟುವಟಿಕೆಗಳಿಗೆ ತೊಂದರೆ ಆಯಿತು. ಕುರಿ, ಮೇಕೆ ಹಾಗೂ ದನಕರುಗಳನ್ನು ಮೇಲೂ ಬಿಡಲಾಗದೆ ಒಳಗೂ ಕಟ್ಟಲಾಗದೆ ಇಕ್ಕಟ್ಟಿನ ಪರಿಸ್ಥಿತಿ ಎದುರಿಸುವಂತಾಯಿತು.ಹಸಿಕಡಲೆ, ಜೋಳ, ರಾಗಿ, ಹುರುಳಿ, ಕೊತ್ತಂಬರಿ, ಭತ್ತ, ಮುಸುಕಿನಜೋಳ ಮೊದಲಾದ ಬೆಳೆಗಳು ವಿವಿಧ ಹಂತದಲ್ಲಿವೆ. ಈ ಬೆಳೆಗಳು ಕಟಾವು ಹಂತದಲ್ಲಿ ಇಲ್ಲದಿರುವುದರಿಂದ ಮಳೆಯಿಂದ ಯಾವುದೇ ಸಮಸ್ಯೆ ಇಲ್ಲ ಎನ್ನುತ್ತಾರೆ ಕೃಷಿ ಇಲಾಖೆ ಆಧಿಕಾರಿಗಳು. ಆದರೆ ಸತತವಾಗಿ ಜೋರುಮಳೆ ಹಿಡಿದರೆ ಕೊತ್ತಂಬರಿ ಬೆಳವಣಿಗೆ ಕುಂಠಿತವಾಗುವ ಅಪಾಯವಿದೆ. ಇನ್ನು ಅರಿಶಿನ ಮತ್ತು ಭತ್ತಕ್ಕೆ ವಿಶೇಷವಾಗಿ ತರಕಾರಿ ಬೆಳೆಗಳಿಗೆ ರೋಗ ರುಜಿನ ಬಾಧಿಸುವ ಸಾಧ್ಯತೆ ಇದೆ. ಆದ್ದರಿಂದ ಮುನ್ನೆಚ್ಚರಿಕೆ ವಹಿಸಬೇಕು ಎಂಬುದು ಕೃಷಿ ತಜ್ಞರ ಅಭಿಪ್ರಾಯ.
ಜಿಟಿ ಮಳೆಯಿಂದ ಕೃಷಿ ಬೆಳೆಗಳಿಗೆ ಅಂತಹ ಸಮಸ್ಯೆ ಇಲ್ಲ. ಕೊಯ್ಲಿಗೆ ಬಂದಿರುವ ಬೆಳೆಗಳಿದ್ದರೆ ತೊಂದರೆಯಾಗುತ್ತಿತ್ತು.
-ಮಧುಸೂದನ್, ಜಂಟಿ ಕೃಷಿ ನಿರ್ದೇಶಕ.
ಮಳೆ ಬಿರುಸಾಗುವ ಮುನ್ಸೂಚನೆ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ಮಳೆ ಇನ್ನೂ ಜಾಸ್ತಿಯಾಗುವ ಸಂಭವವಿದೆ. ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರದವರೆಗೂ ಮಳೆ ಬೀಳುವ ಮುನ್ಸೂಚನೆ ಇದೆ.
-ಎಚ್.ಕೆ.ರಜತ್, ಕೃಷಿ ಹವಾಮಾನ ತಜ್ಞ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…