ಚಾಮರಾಜನಗರ

ಚಾ.ನಗರ ಜಿಲ್ಲೆಯಲ್ಲಿ ಜಿಟಿ ಮಳೆ; ಜನಜೀವನ ಅಸ್ತವ್ಯಸ್ತ

ಚಾಮರಾಜನಗರ: ತಮಿಳುನಾಡಿನ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಜಿಲ್ಲೆಯಾದ್ಯಂತ ಶುಕ್ರವಾರ ಜಿಟಿಜಿಟಿ ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಬೆಳಿಗ್ಗೆ 10 ಗಂಟೆಗೆ ಶುರುವಾದ ತುಂತುರು ಮಳೆ ಸಂಜೆವರೆಗೂ ಒಂದೇ ಸಮನೆ ಬಿದ್ದಿತು. 5 ಗಂಟೆಯಲ್ಲಿ ನಿಂತಿದ್ದು ದಟ್ಟ ಮೋಡಕವಿದ ಶೀತವಾತಾವರಣ ಆವರಿಸಿತ್ತು.

ಮಳೆಯಿಂದ ಬೀದಿಬದಿ ಮತ್ತು ತಳ್ಳುಗಾಡಿ ವ್ಯಾಪಾರ ಸಂಪೂರ್ಣ  ಸ್ಥಬ್ಧ ವಾಗಿತ್ತು. ಜನತೆ ರೈನ್ ಕೋಟ್, ಛತ್ರಿ ಅವಲಂಬಿಸಿ ಹೊರಬರಬೇಕಾಯಿತು. ರಸ್ತೆಗಳಲ್ಲಿ ನೀರು ಹರಿದಾಡಿತು. ಹೇಳಿಕೊಳ್ಳುವಂತಹ ಜನರಿಲ್ಲದೆ ಎಲ್ಲಾ ರೀತಿಯ ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀರಿತು.ಇನ್ನು ಗ್ರಾಮೀಣ ಭಾಗದಲ್ಲಿ ಕೃಷಿಚಟುವಟಿಕೆಗಳಿಗೆ ತೊಂದರೆ ಆಯಿತು. ಕುರಿ, ಮೇಕೆ ಹಾಗೂ ದನಕರುಗಳನ್ನು ಮೇಲೂ ಬಿಡಲಾಗದೆ ಒಳಗೂ ಕಟ್ಟಲಾಗದೆ ಇಕ್ಕಟ್ಟಿನ ಪರಿಸ್ಥಿತಿ ಎದುರಿಸುವಂತಾಯಿತು.ಹಸಿಕಡಲೆ, ಜೋಳ, ರಾಗಿ, ಹುರುಳಿ, ಕೊತ್ತಂಬರಿ, ಭತ್ತ, ಮುಸುಕಿನಜೋಳ ಮೊದಲಾದ ಬೆಳೆಗಳು ವಿವಿಧ ಹಂತದಲ್ಲಿವೆ. ಈ ಬೆಳೆಗಳು ಕಟಾವು ಹಂತದಲ್ಲಿ ಇಲ್ಲದಿರುವುದರಿಂದ ಮಳೆಯಿಂದ ಯಾವುದೇ ಸಮಸ್ಯೆ ಇಲ್ಲ ಎನ್ನುತ್ತಾರೆ ಕೃಷಿ ಇಲಾಖೆ ಆಧಿಕಾರಿಗಳು. ಆದರೆ ಸತತವಾಗಿ ಜೋರುಮಳೆ ಹಿಡಿದರೆ ಕೊತ್ತಂಬರಿ ಬೆಳವಣಿಗೆ ಕುಂಠಿತವಾಗುವ ಅಪಾಯವಿದೆ. ಇನ್ನು ಅರಿಶಿನ ಮತ್ತು ಭತ್ತಕ್ಕೆ ವಿಶೇಷವಾಗಿ ತರಕಾರಿ ಬೆಳೆಗಳಿಗೆ ರೋಗ ರುಜಿನ ಬಾಧಿಸುವ ಸಾಧ್ಯತೆ ಇದೆ. ಆದ್ದರಿಂದ ಮುನ್ನೆಚ್ಚರಿಕೆ ವಹಿಸಬೇಕು ಎಂಬುದು ಕೃಷಿ ತಜ್ಞರ ಅಭಿಪ್ರಾಯ.

 

ಜಿಟಿ ಮಳೆಯಿಂದ ಕೃಷಿ ಬೆಳೆಗಳಿಗೆ ಅಂತಹ ಸಮಸ್ಯೆ ಇಲ್ಲ. ಕೊಯ್ಲಿಗೆ ಬಂದಿರುವ ಬೆಳೆಗಳಿದ್ದರೆ ತೊಂದರೆಯಾಗುತ್ತಿತ್ತು.

-ಮಧುಸೂದನ್, ಜಂಟಿ ಕೃಷಿ ನಿರ್ದೇಶಕ.

ಮಳೆ ಬಿರುಸಾಗುವ ಮುನ್ಸೂಚನೆ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ಮಳೆ ಇನ್ನೂ ಜಾಸ್ತಿಯಾಗುವ ಸಂಭವವಿದೆ. ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರದವರೆಗೂ ಮಳೆ ಬೀಳುವ ಮುನ್ಸೂಚನೆ ಇದೆ.

-ಎಚ್.ಕೆ.ರಜತ್, ಕೃಷಿ ಹವಾಮಾನ ತಜ್ಞ.

andolana

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

7 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

7 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

8 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

9 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

9 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

9 hours ago