ಚಾಮರಾಜನಗರ

ಚಾ.ನಗರ ಜಿಲ್ಲೆಯಲ್ಲಿ ಜಿಟಿ ಮಳೆ; ಜನಜೀವನ ಅಸ್ತವ್ಯಸ್ತ

ಚಾಮರಾಜನಗರ: ತಮಿಳುನಾಡಿನ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಜಿಲ್ಲೆಯಾದ್ಯಂತ ಶುಕ್ರವಾರ ಜಿಟಿಜಿಟಿ ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಬೆಳಿಗ್ಗೆ 10 ಗಂಟೆಗೆ ಶುರುವಾದ ತುಂತುರು ಮಳೆ ಸಂಜೆವರೆಗೂ ಒಂದೇ ಸಮನೆ ಬಿದ್ದಿತು. 5 ಗಂಟೆಯಲ್ಲಿ ನಿಂತಿದ್ದು ದಟ್ಟ ಮೋಡಕವಿದ ಶೀತವಾತಾವರಣ ಆವರಿಸಿತ್ತು.

ಮಳೆಯಿಂದ ಬೀದಿಬದಿ ಮತ್ತು ತಳ್ಳುಗಾಡಿ ವ್ಯಾಪಾರ ಸಂಪೂರ್ಣ  ಸ್ಥಬ್ಧ ವಾಗಿತ್ತು. ಜನತೆ ರೈನ್ ಕೋಟ್, ಛತ್ರಿ ಅವಲಂಬಿಸಿ ಹೊರಬರಬೇಕಾಯಿತು. ರಸ್ತೆಗಳಲ್ಲಿ ನೀರು ಹರಿದಾಡಿತು. ಹೇಳಿಕೊಳ್ಳುವಂತಹ ಜನರಿಲ್ಲದೆ ಎಲ್ಲಾ ರೀತಿಯ ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀರಿತು.ಇನ್ನು ಗ್ರಾಮೀಣ ಭಾಗದಲ್ಲಿ ಕೃಷಿಚಟುವಟಿಕೆಗಳಿಗೆ ತೊಂದರೆ ಆಯಿತು. ಕುರಿ, ಮೇಕೆ ಹಾಗೂ ದನಕರುಗಳನ್ನು ಮೇಲೂ ಬಿಡಲಾಗದೆ ಒಳಗೂ ಕಟ್ಟಲಾಗದೆ ಇಕ್ಕಟ್ಟಿನ ಪರಿಸ್ಥಿತಿ ಎದುರಿಸುವಂತಾಯಿತು.ಹಸಿಕಡಲೆ, ಜೋಳ, ರಾಗಿ, ಹುರುಳಿ, ಕೊತ್ತಂಬರಿ, ಭತ್ತ, ಮುಸುಕಿನಜೋಳ ಮೊದಲಾದ ಬೆಳೆಗಳು ವಿವಿಧ ಹಂತದಲ್ಲಿವೆ. ಈ ಬೆಳೆಗಳು ಕಟಾವು ಹಂತದಲ್ಲಿ ಇಲ್ಲದಿರುವುದರಿಂದ ಮಳೆಯಿಂದ ಯಾವುದೇ ಸಮಸ್ಯೆ ಇಲ್ಲ ಎನ್ನುತ್ತಾರೆ ಕೃಷಿ ಇಲಾಖೆ ಆಧಿಕಾರಿಗಳು. ಆದರೆ ಸತತವಾಗಿ ಜೋರುಮಳೆ ಹಿಡಿದರೆ ಕೊತ್ತಂಬರಿ ಬೆಳವಣಿಗೆ ಕುಂಠಿತವಾಗುವ ಅಪಾಯವಿದೆ. ಇನ್ನು ಅರಿಶಿನ ಮತ್ತು ಭತ್ತಕ್ಕೆ ವಿಶೇಷವಾಗಿ ತರಕಾರಿ ಬೆಳೆಗಳಿಗೆ ರೋಗ ರುಜಿನ ಬಾಧಿಸುವ ಸಾಧ್ಯತೆ ಇದೆ. ಆದ್ದರಿಂದ ಮುನ್ನೆಚ್ಚರಿಕೆ ವಹಿಸಬೇಕು ಎಂಬುದು ಕೃಷಿ ತಜ್ಞರ ಅಭಿಪ್ರಾಯ.

 

ಜಿಟಿ ಮಳೆಯಿಂದ ಕೃಷಿ ಬೆಳೆಗಳಿಗೆ ಅಂತಹ ಸಮಸ್ಯೆ ಇಲ್ಲ. ಕೊಯ್ಲಿಗೆ ಬಂದಿರುವ ಬೆಳೆಗಳಿದ್ದರೆ ತೊಂದರೆಯಾಗುತ್ತಿತ್ತು.

-ಮಧುಸೂದನ್, ಜಂಟಿ ಕೃಷಿ ನಿರ್ದೇಶಕ.

ಮಳೆ ಬಿರುಸಾಗುವ ಮುನ್ಸೂಚನೆ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ಮಳೆ ಇನ್ನೂ ಜಾಸ್ತಿಯಾಗುವ ಸಂಭವವಿದೆ. ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರದವರೆಗೂ ಮಳೆ ಬೀಳುವ ಮುನ್ಸೂಚನೆ ಇದೆ.

-ಎಚ್.ಕೆ.ರಜತ್, ಕೃಷಿ ಹವಾಮಾನ ತಜ್ಞ.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

4 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

5 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

10 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

10 hours ago