ಗುಂಡ್ಲುಪೇಟೆ: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿ ಸದಸ್ಯರಾಗಿ ಶಿಂಡನಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಸವಯ್ಯ ಅವರ ಪುತ್ರ ಕಂದೇಗಾಲ ಮಹೇಶ್ ನೇಮಕಗೊಂಡಿದ್ದಾರೆ.
ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರನ್ನು ಗುರುತಿಸಿ ಶಾಸಕರಾದ ಎಚ್.ಎಂ.ಗಣೇಶ್ ಪ್ರಸಾದ್ ಶಿಫಾರಸ್ಸಿನ ಮೇರೆಗೆ ಸಮಿತಿ ಸದಸ್ಯರಾಗಿ ರಾಜ್ಯಾಧ್ಯಕ್ಷರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ವಿವಿಧ ದಲಿತಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಮಹೇಶ್, ಅನ್ಯಾಯದ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ಡಾ.ಬಾಬಾ ಸಾಹೇಬ್ ಅಂಂಬೇಡ್ಕರ್, ಬಾಬು ಜಗಜೀವನ ರಾಂ ಸಂಘಟನೆಯ ಸದಸ್ಯರಾಗಿಯೂ ತೊಡಗಿಸಿಕೊಂಡಿರುವ ಇವರು, ಯುವ ಸಂಘಟಕರನ್ನು ಸಂಘಟಿಸುವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ನನ್ನನ್ನು ಗುರುತಿಸಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿರುವ ಶಾಸಕ ಗಣೇಶ್ ಪ್ರಸಾದ್, ಮುಖಂಡರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…