ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ ಮುಖ್ಯ ಎಂದು ಚಿಕ್ಕಬಳ್ಳಾಪುರ ಸಂಸದ ಸುಧಾಕರ್ ತಿಳಿಸಿದರು.
ವೈಕುಂಠ ಏಕಾದಶಿ ಹಿನ್ನೆಲೆ ಶ್ರೀರಂಗಂ ತೆರಳುವ ವೇಳೆ ಹನೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮಾದ್ಯಮಗಳ ಜೊತೆ ಅವರು ಮಾತನಾಡಿದರು.
ಸಿಎಂ ಸಿದ್ದರಾಮಯ್ಯ ಮುಂದುವರೆಯುತ್ತಾರಾ, ಡಿ.ಕೆ.ಶಿವಕುಮಾರ್ ಅಥವಾ ಜಿ.ಪರಮೇಶ್ವರ್ ಮುಖ್ಯಮಂತ್ರಿ ಆಗ್ತಾರಾ ಅನ್ನೋದು ಮುಖ್ಯವಲ್ಲ
ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ ಮುಖ್ಯ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ಗ್ಯಾರಂಟಿ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತಂದಿಲ್ಲ ಎಂದು ಟೀಕಿಸಿದರು.
ಗೃಹಲಕ್ಷ್ಮೀ ಯೋಜನೆಯ ಹಣ ಬಾಕಿಯಿದ್ದು, ಸರ್ಕಾರಿ ನೌಕರರಿಗೆ ಸಂಬಳವೂ ತಡವಾಗಿ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯದ ಆಸ್ಪತ್ರೆಗಳಲ್ಲಿ ವೈದ್ಯರು, ಔಷಧಿ ಸೇರಿದಂತೆ ಅಗತ್ಯ ಸೇವೆಗಳು ಲಭ್ಯವಿಲ್ಲದ ಸ್ಥಿತಿ ಇದೆ ಹಾಗೂ ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಸರ್ಕಾರ ಹೇಳಿದ್ದರೂ, ಇದುವರೆಗೂ ಅದು ಜಾರಿಯಾಗಿಲ್ಲ. ಇದರಿಂದ ವಿದ್ಯಾರ್ಥಿಗಳು ಗೊಂದಲದ ಪರಿಸ್ಥಿತಿಗೆ ಸಿಲುಕಿದ್ದಾರೆ. ಕೇಂದ್ರ ಶಿಕ್ಷಣ ನೀತಿಯೂ ಇಲ್ಲ, ರಾಜ್ಯದ ಹೊಸ ಶಿಕ್ಷಣ ನೀತಿಯೂ ಇಲ್ಲದ ಕಾರಣ ವಿದ್ಯಾರ್ಥಿಗಳ ಭವಿಷ್ಯ ಕುರಿತು ಚರ್ಚೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಪೊಲೀಸ್ ಇಲಾಖೆ ಕೈಕಟ್ಟಿ ಕುಳಿತಿವೆ:
ಇದೇ ವೇಳೆ ಮಹಾರಾಷ್ಟ್ರ ಪೊಲೀಸರು ಬೆಂಗಳೂರು ಹಾಗೂ ಮೈಸೂರಿನಲ್ಲಿ ಬೃಹತ್ ಡ್ರಗ್ಸ್ ಜಾಲವನ್ನು ಭೇದಿಸಿ, ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಮಾತನಾಡಿದ ಸಂಸದರು ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾದ ವ್ಯಾಪಕತೆಯನ್ನು ಇದು ಎತ್ತಿ ತೋರಿಸುತ್ತದೆ. ಸ್ಥಳೀಯ ಪೊಲೀಸ್ ಇಲಾಖೆಯ ವೈಫಲ್ಯ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸುತ್ತಿವೆ ಹಾಗೂ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕೈಕಟ್ಟಿ ಕುಳಿತಿವೆ ಎಂದು ಟೀಕಿಸಿದರು.
ಈ ಪ್ರಕರಣದಲ್ಲಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…