ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದ ಕಗ್ಗಲಿಗುಂಡಿ ಪ್ರದೇಶದಲ್ಲಿ (ಗುಂಡಾಲ್ ಜಲಾಶಯ ಬಳಿ) ಶನಿವಾರ ೩ ವರ್ಷದ ಹುಲಿಯೊಂದು ಮೃತಪಟ್ಟಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಕಗ್ಗಲಿಗುಂಡಿ ಪ್ರದೇಶದಲ್ಲಿ ಗಸ್ತು ತಿರುಗುವಾಗ ಹುಲಿಯ ಕಳೇಬರ ಪತ್ತೆಯಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಅರಣ್ಯ ಇಲಾಖೆಯ ಪಶು ವೈದ್ಯ ಡಾ.ಮುಜಾಹಿದ್ ಅವರಿಂದ ಮರಣೋತ್ತರ ಪರೀಕ್ಷೆ ನಡೆಸಿ ಕಳೇಬರವನ್ನು ಸುಟ್ಟು ಹಾಕಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಂರಕ್ಷಿತಾರಣ್ಯದ ನಿರ್ದೇಶಕರಾದ ದೀಪ ಕಂಟ್ರ್ಯಾಕ್ಸ್ ಹುಲಿ ಕಳೇಬರ ದೊರೆತ ಸ್ಥಳದಲ್ಲಿ ಹುಲಿಗಳ ಹೆಚ್ಚು ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು ಕಾದಾಟದಲ್ಲಿ ಅಶಕ್ತ ಹುಲಿ ಮೃತಪಟ್ಟಿರಬಹುದು.
ಹುಲಿಯನ್ನು ಬೇಟೆಯಾಡಿರುವ ಲಕ್ಷಣಗಳಿಲ್ಲ.
ವಿಷ ಪ್ರಶಾನದಿಂದಲೂ ಸಾವಿಗೀಡಾಗಿಲ್ಲ. ಸ್ಥಳದಲ್ಲೇ ಹುಲಿಯ ಚರ್ಮ, ಉಗುರುಗಳು ಪತ್ತೆಯಾಗಿವೆ. ಹುಲಿಯ ಕಳೇಬರವನ್ನು ಸಂಪೂರ್ಣ ಸ್ಕ್ಯಾನಿಂಗ್ ಮಾಡಿ ರಾಜ್ಯ ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಅವರ ಸೂಚನೆಯಂತೆ ಅಂತ್ಯ ಸಂಸ್ಕಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…