ಚಾಮರಾಜನಗರ

ಗುಂಡಾಲ್ ಜಲಾಶಯ ಬಳಿ ಹುಲಿ ಸಾವು

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದ ಕಗ್ಗಲಿಗುಂಡಿ ಪ್ರದೇಶದಲ್ಲಿ (ಗುಂಡಾಲ್ ಜಲಾಶಯ ಬಳಿ) ಶನಿವಾರ ೩ ವರ್ಷದ ಹುಲಿಯೊಂದು ಮೃತಪಟ್ಟಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಕಗ್ಗಲಿಗುಂಡಿ ಪ್ರದೇಶದಲ್ಲಿ ಗಸ್ತು ತಿರುಗುವಾಗ ಹುಲಿಯ ಕಳೇಬರ ಪತ್ತೆಯಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಅರಣ್ಯ ಇಲಾಖೆಯ ಪಶು ವೈದ್ಯ ಡಾ.ಮುಜಾಹಿದ್ ಅವರಿಂದ ಮರಣೋತ್ತರ ಪರೀಕ್ಷೆ ನಡೆಸಿ ಕಳೇಬರವನ್ನು ಸುಟ್ಟು ಹಾಕಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಂರಕ್ಷಿತಾರಣ್ಯದ ನಿರ್ದೇಶಕರಾದ ದೀಪ ಕಂಟ್ರ್ಯಾಕ್ಸ್ ಹುಲಿ ಕಳೇಬರ ದೊರೆತ ಸ್ಥಳದಲ್ಲಿ ಹುಲಿಗಳ ಹೆಚ್ಚು ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು ಕಾದಾಟದಲ್ಲಿ ಅಶಕ್ತ ಹುಲಿ ಮೃತಪಟ್ಟಿರಬಹುದು.
ಹುಲಿಯನ್ನು ಬೇಟೆಯಾಡಿರುವ ಲಕ್ಷಣಗಳಿಲ್ಲ.

ವಿಷ ಪ್ರಶಾನದಿಂದಲೂ ಸಾವಿಗೀಡಾಗಿಲ್ಲ. ಸ್ಥಳದಲ್ಲೇ ಹುಲಿಯ ಚರ್ಮ, ಉಗುರುಗಳು ಪತ್ತೆಯಾಗಿವೆ. ಹುಲಿಯ ಕಳೇಬರವನ್ನು ಸಂಪೂರ್ಣ ಸ್ಕ್ಯಾನಿಂಗ್ ಮಾಡಿ ರಾಜ್ಯ ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಅವರ ಸೂಚನೆಯಂತೆ ಅಂತ್ಯ ಸಂಸ್ಕಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

andolana

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

4 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

9 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

13 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

13 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

13 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

16 hours ago