ಚಾಮರಾಜನಗರ

ಗುಂಡ್ಲುಪೇಟೆ | ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ ; ಕೊಲೆಯಲ್ಲಿ ಅಂತ್ಯ

ಗುಂಡ್ಲುಪೇಟೆ : ಕ್ಷುಲ್ಲಕ ವಿಚಾರಕ್ಕೆ ಶುರುವಾದ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.
ಪಟ್ಟಣದ ಹೊರವಲಯದ ಜೆಪಿ ಇನ್‌ ಸಮೀಪದಲ್ಲಿ ಇರುವ ಹಿಂದೂಸ್ತಾನ್ ಇಟ್ಟಿಗೆ ಪ್ಯಾಕ್ಟರಿಯ ವಾಸದ ಮನೆ ಮುಂಭಾಗ ಎಣ್ಣೆ ಪಾರ್ಟಿ ಮಾಡುತಿದ್ದ ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ಲಾಂಗ್ ನಿಂದ ಸ್ನೇಹಿತರೇ ಹೊಡೆದು ಪೈಜಲ್ ( 47) ಎಂಬ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ:-ಗುಂಡ್ಲುಪೇಟೆ | ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ ; ಕೊಲೆಯಲ್ಲಿ ಅಂತ್ಯ

ಮಂಗಳವಾರ ರಾತ್ರಿ ಮೃತ ಪೈಜಲ್ ಅತನ ಸ್ನೇಹಿತರಾದ ಕುಟ್ಟಿಪ್ಪಾ, ಜೊತೆ ಗುಂಡ್ಲುಪೇಟೆ ಪಟ್ಟಣಕ್ಕೆ ಹೋಗುತ್ತೇನೆಂದು ತೆರಳಿದ್ದು ಅಲ್ಲಿಂದ ಸ್ನೇಹಿತರಾದ ಸೋಮೇಶ್, ಮಣಿವಣ್ಣನ್@ ರಂಜಿತ್, ರಘುರಾಮ್ ಜೊತೆ ಸೊಮೇಶ್ ಇದ್ದ ಜಾಗಕ್ಕೆ ಪಾರ್ಟಿ‌ಮಾಡಲು ತೆರಳಿದ್ದಾರೆ. ಈ ಸಂದರ್ಭದಲ್ಲಿ ಮಣಿವಣ್ಣನ್ ಸೊಮೆಶನ ಕಾರನ್ನು ಮಾರಾಟಕ್ಕೆ ಕೊಡು ಎಂದು ಕೇಳಿದ್ದಾನೆ. ಇದಕ್ಕೆ ಪೈಜಲ್ ಸೊಮೇಶ್ ನ ಕಾರು ಯಾವುದೋ ಕೇಸ್ ಗೆ ಪಿಟ್ ಹಾಗಿದೆ ನೋಡಿಕೊಂಡು ತೆಗೆದುಕೊ ಎಂದಿದ್ದಾನೆ. ಇದಕ್ಕೆ ಸ್ನೆಹಿತನಾಗಿ ನನ್ನ ಕಾರಿನ ವ್ಯಾಪಾರದ ಬಗ್ಗೆ ತಕರಾರು ಮಾಡುತ್ತೀಯ ಎಂದು ಆಗ ಸೊಮೇಶ್ ಹೊಡೆದಿದ್ದಾನೆ ಮಣಿವಣ್ಣನ್ ಲಾಂಗ್ ನಿಂದ ತಲೆ ಕತ್ತಿಗೆ ಹಲ್ಲೆ ಮಾಡಿದಾಗ ತಿವ್ರ ರಕ್ತಸ್ರಾವವಾಗಿದೆ ತಕ್ಷಣ ಕಾರಿನಲ್ಲಿ ಅವರೇ ಸರ್ಕಾರಿ ಅಸ್ಪತ್ರೆಗೆ ಕರೆತಂದಿದ್ದಾರೆ ಆದರೆ ಪೈಜಲ್ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಎಲ್ಲಾ ಆರೋಪಿಗಳು ತಮಿಳುನಾಡಿನ ಮೂಲದವರಾಗಿದ್ದು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮೇಶ್, ಮಣಿವಣ್ಣನ್, ರಘುರಾಮ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಾಖಲೆ ಬಜೆಟ್; ಹಾದಿ ಸುಲಭದ್ದಲ್ಲ

ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ…

50 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಇವರು ಲಕ್ಕಿ ಪೊಲಿಟಿಷಿಯನ್ ಡುಕಾಟಿ ರಾಮಚಂದ್ರಪ್ಪ

ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ…

54 mins ago

ಅಭಿವೃದ್ಧಿಯತ್ತ ಕೊಡಗಿನ ಸರ್ಕಾರಿ ಗೋಶಾಲೆ

ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ …

1 hour ago

60 ದಿನಗಳಲ್ಲಿ ಕಲ್ಲಂಗಡಿ ಬೆಳೆದು ಲಾಭ ಗಳಿಸಿದ ರೈತ

ಮಾಗಳಿ ರಾಮೇಗೌಡ ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ…

1 hour ago

108 ವರ್ಷಗಳ ಶಾಲೆಯಲ್ಲಿ ನೂರಾರು ಮಕ್ಕಳ ಕಲರವ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ವಯಸ್ಸಾದವರು ಈ ಶಾಲೆಯನ್ನು ನೋಡಿದರೆ, ತಮ್ಮ ಬಾಲ್ಯದ ನೆನಪುಗಳಿಗೆ ರೆಕ್ಕೆಪುಕ್ಕ…

1 hour ago

ಮೈಸೂರು ಜಿಲ್ಲೆಗೆ 13 ನಮ್ಮ ಕ್ಲಿನಿಕ್ ಮಂಜೂರು

ಕೆ.ಬಿ.ರಮೇಶನಾಯಕ ಯಾತ್ರಾಸ್ಥಳ ಚಾಮುಂಡಿಬೆಟ್ಟ, ಅಲ್ಪಸಂಖ್ಯಾತರು ಹೆಚ್ಚಿರುವ ಬಡೇಮಕಾನ್‌ನಲ್ಲಿ ಶೀಘ್ರ ಆರಂಭ ಮೈಸೂರು: ನಗರ ಪ್ರದೇಶದ ಜನರಿಗೆ ಸ್ಥಳೀಯವಾಗಿ ಚಿಕಿತ್ಸೆ ದೊರೆಯುವಂತೆ…

1 hour ago