ಗುಂಡ್ಲುಪೇಟೆ: ಶಾಲಾ ವಾಹನದಡಿ ಸಿಲುಕಿ ಬಾಲಕಿ ದಾರುಣ ಸಾವು

ಗುಂಡ್ಲುಪೇಟೆ/ಚಾಮರಾಜನಗರ: ಶಾಲಾ ವಾಹನದಿಂದ ಇಳಿದು ಹಿಂಬದಿ ನಿಂತಿದ್ದ 3 ವರ್ಷದ ಬಾಲಕಿ ಅದೇ ವಾಹನಕ್ಕೆ ಸಿಲುಕಿ   ಮೃತಪಟ್ಟ ದಾರುಣ ಘಟನೆ ಗುರುವಾರ ಗುಂಡ್ಲುಪೇಟೆಯ ಉಡಿಗಾಲ ಗ್ರಾಮದಲ್ಲಿ  ನಡೆದಿದೆ.

ತಾಲ್ಲೂಕಿನ ಕೋಡಸೋಗೆ ಗ್ರಾಮದ ಶಾಂತಪ್ಪ ಎಂಬುವರ ಮಗಳು ಅನ್ವಿತಾ (೪) ಮೃತಪಟ್ಟ ಬಾಲಕಿ.

ಘಟನೆ ವಿವರ: ಅನ್ವಿತಾ ಉಡಿಗಾಲದಲ್ಲಿರುವ ತಮ್ಮ ದೊಡ್ಡಪ್ಪನ ಮನೆಯಲ್ಲಿ ಉಳಿದುಕೊಂಡು ಅದೇ ಗ್ರಾಮದಲ್ಲಿರುವ ಚಂದನ ಕಾನ್ವೆಂಟ್‌ನಲ್ಲಿ ಪ್ರಿ ಕೆಜಿಗೆ ದಾಖಲಾಗಿದ್ದಳು. ಪ್ರತಿ ದಿನ ಮನೆಯಿಂದ ಶಾಲೆ ವಾಹನದಲ್ಲಿ ಹೋಗಿ ಬರುತ್ತಿದ್ದಳು. ಎಂದಿನಂತೆ ಚಾಲಕ ಮನೆ ಮುಂದೆ ವಾಹನ ನಿಲ್ಲಿಸಿ, ಇಳಿಸಿದ್ದಾನೆ.

ವಾಹನದಲ್ಲಿ ಚಾಲಕ ಹೊರತು ಪಡಿಸಿ, ಸಹಾಯಕರು ಇರಲಿಲ್ಲ. ಹೀಗಾಗಿ ಬಾಲಕಿ ಬಸ್‌ನಿಂದ ಇಳಿದು ಹಿಂಬದಿ ನಿಂತಿದ್ದಳು. ಇದನ್ನು ಗಮನಿಸದ ಚಾಲಕ ವಾಹನವನ್ನು ರಿವರ್ಸ್ ತೆಗೆಯಲು ಮುಂದಾದಾಗ ಬಾಲಕಿಗೆ ಡಿಕ್ಕಿ ಹೊಡೆದಿದೆ. ನೆಲಕ್ಕೆ ಬಿದ್ದ ಬಾಲಕಿಯ ತಲೆ ಮೇಲೆ ಚಕ್ರ ಹರಿದು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದಾರೆ.

ಸ್ಥಳದಲ್ಲಿಯೇ ಬಾಲಕಿಯ ಪೋಷಕರು ಹಾಗು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಶಾಲೆಯ ಆಡಳಿತ ಮಂಡಳಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಖಾಸಗಿ ವಿದ್ಯಾ ಸಂಸ್ಥೆಗಳು ಶಾಲಾ ವಾಹನಗಳನ್ನು ಬಿಟ್ಟಿದ್ದು, ಯಾವುದೇ ರೀತಿ ಸುರಕ್ಷತೆ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಕಿಡಿಕಾರಿದರು.

ಖಾದಗಿ ಶಾಲೆಯ ವಾಹನಗಳ ವಿರುದ್ದ ಕ್ರಮ ತೆಗೆದುಕೊಳ್ಳಬೇಕು. ಪ್ರತಿ ಶಾಲಾ ವಾಹನದಲ್ಲಿ ಕಡ್ಡಾಯವಾಗಿ ಅನುಭವಿ ಚಾಲಕ, ಮತ್ತು ಸಹಾಯಕ ಇರುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿವೈಎಸ್ಪಿ ಲಕ್ಷ್ಮಯ್ಯ, ಸರ್ಕಲ್ ಇನ್ಸ್ ಪೆಕ್ಟರ್ ಚಿಕ್ಕರಾಜಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…

12 mins ago

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

2 hours ago

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

3 hours ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

3 hours ago

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

13 hours ago