ಗುಂಡ್ಲುಪೇಟೆ/ಚಾಮರಾಜನಗರ: ಶಾಲಾ ವಾಹನದಿಂದ ಇಳಿದು ಹಿಂಬದಿ ನಿಂತಿದ್ದ 3 ವರ್ಷದ ಬಾಲಕಿ ಅದೇ ವಾಹನಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಗುರುವಾರ ಗುಂಡ್ಲುಪೇಟೆಯ ಉಡಿಗಾಲ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಕೋಡಸೋಗೆ ಗ್ರಾಮದ ಶಾಂತಪ್ಪ ಎಂಬುವರ ಮಗಳು ಅನ್ವಿತಾ (೪) ಮೃತಪಟ್ಟ ಬಾಲಕಿ.
ಘಟನೆ ವಿವರ: ಅನ್ವಿತಾ ಉಡಿಗಾಲದಲ್ಲಿರುವ ತಮ್ಮ ದೊಡ್ಡಪ್ಪನ ಮನೆಯಲ್ಲಿ ಉಳಿದುಕೊಂಡು ಅದೇ ಗ್ರಾಮದಲ್ಲಿರುವ ಚಂದನ ಕಾನ್ವೆಂಟ್ನಲ್ಲಿ ಪ್ರಿ ಕೆಜಿಗೆ ದಾಖಲಾಗಿದ್ದಳು. ಪ್ರತಿ ದಿನ ಮನೆಯಿಂದ ಶಾಲೆ ವಾಹನದಲ್ಲಿ ಹೋಗಿ ಬರುತ್ತಿದ್ದಳು. ಎಂದಿನಂತೆ ಚಾಲಕ ಮನೆ ಮುಂದೆ ವಾಹನ ನಿಲ್ಲಿಸಿ, ಇಳಿಸಿದ್ದಾನೆ.
ವಾಹನದಲ್ಲಿ ಚಾಲಕ ಹೊರತು ಪಡಿಸಿ, ಸಹಾಯಕರು ಇರಲಿಲ್ಲ. ಹೀಗಾಗಿ ಬಾಲಕಿ ಬಸ್ನಿಂದ ಇಳಿದು ಹಿಂಬದಿ ನಿಂತಿದ್ದಳು. ಇದನ್ನು ಗಮನಿಸದ ಚಾಲಕ ವಾಹನವನ್ನು ರಿವರ್ಸ್ ತೆಗೆಯಲು ಮುಂದಾದಾಗ ಬಾಲಕಿಗೆ ಡಿಕ್ಕಿ ಹೊಡೆದಿದೆ. ನೆಲಕ್ಕೆ ಬಿದ್ದ ಬಾಲಕಿಯ ತಲೆ ಮೇಲೆ ಚಕ್ರ ಹರಿದು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದಾರೆ.
ಸ್ಥಳದಲ್ಲಿಯೇ ಬಾಲಕಿಯ ಪೋಷಕರು ಹಾಗು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಶಾಲೆಯ ಆಡಳಿತ ಮಂಡಳಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಖಾಸಗಿ ವಿದ್ಯಾ ಸಂಸ್ಥೆಗಳು ಶಾಲಾ ವಾಹನಗಳನ್ನು ಬಿಟ್ಟಿದ್ದು, ಯಾವುದೇ ರೀತಿ ಸುರಕ್ಷತೆ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಕಿಡಿಕಾರಿದರು.
ಖಾದಗಿ ಶಾಲೆಯ ವಾಹನಗಳ ವಿರುದ್ದ ಕ್ರಮ ತೆಗೆದುಕೊಳ್ಳಬೇಕು. ಪ್ರತಿ ಶಾಲಾ ವಾಹನದಲ್ಲಿ ಕಡ್ಡಾಯವಾಗಿ ಅನುಭವಿ ಚಾಲಕ, ಮತ್ತು ಸಹಾಯಕ ಇರುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿವೈಎಸ್ಪಿ ಲಕ್ಷ್ಮಯ್ಯ, ಸರ್ಕಲ್ ಇನ್ಸ್ ಪೆಕ್ಟರ್ ಚಿಕ್ಕರಾಜಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…