ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಬಿರುಗಾಳಿ ಮಳೆಯಿಂದಾಗಿ ಆರು ಸಾವಿರಕ್ಕೂ ಹೆಚ್ಚು ಬಾಳೆಕಟ್ಟೆ ನೆಲಕಚ್ಚಿ ಅಪಾರ ಪ್ರಮಾಣದ ಬಾಳೆ ನಾಶವಾಗಿದೆ.
ಗುಂಡ್ಲುಪೇಟೆ ತಾಲ್ಲೂಕಿನಾದ್ಯಂತ ಇಂದು(ಮಾರ್ಚ್.24) ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ನೆಲಕಚ್ಚಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದ್ದು, ಲಕ್ಷಾಂತರ ರೂಪಾಯಿಯ ಮೌಲ್ಯ ನಷ್ಟ ಸಂಭವಿಸಿದೆ.
ಈ ದುರಂತ ಶಿವಪುರ ಗ್ರಾಮದ ಸಿದ್ದಪ್ಪ, ಸೋಮಪ್ಪ, ಸದಾನಂದ, ಸುರೇಶ್ ಎಂಬುವರ ಜಮೀನಿನಲ್ಲಿ 6 ಸಾವಿರಕ್ಕೂ ಅಧಿಕ ಬಾಳೆ ಬೆಳೆ ಫಸಲು ಬಿಡುವ ಹಂತದಲ್ಲಿತ್ತು. ಆದರೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಎಲ್ಲವೂ ನೆಲಕಚ್ಚಿದೆ.
ಈ ಮಳೆ ಒಂದೆಡೆ ಹರ್ಷ ತಂದರೆ ಮತ್ತೊಂದೆಡೆ ಬೆಳೆ ನಷ್ಟಕ್ಕೆ ಕಾರಣವಾಗಿದೆ. ಬೆಳೆಹಾನಿಗೆ ಒಳಗಾಗಿದ್ದ ಜಮೀನುಗಳಿಗೆ ತೋಟಗಾರಿಕೆ ಇಲಾಖೆ ಅಧಿಕಾರಿ ಲೀಲಾವತಿ ಹಾಗೂ ಗ್ರಾಮ ಆಡಳಿತಾಧಿಕಾರಿ ಅರುಣ್ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…