ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ ಹೆಣ್ಣು ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ರಾತ್ರಿ ಸಾಕಾನೆಗಳು ಹಾಗೂ ಡ್ರೋನ್ ಕ್ಯಾಮರಾ ಸಹಾಯದಿಂದ ಸೆರೆ ಹಿಡಿದಿದ್ದಾರೆ.
ಸೆರೆಯಾಗಿರು ಹುಲಿಗೆ ಸುಮಾರು ಹನ್ನೊಂದು ವರ್ಷವಾಗಿದೆ ಎಂದು ಅಂದಾಜಿಸಲಾಗಿದೆ. ಹುಲಿ ಸೆರೆಗೆ ಆಗ್ರಹಿಸಿದ್ದ ಗ್ರಾಮಸ್ಥರು ಕಳೆದ ನಾಲ್ಕು ದಿನದ ಹಿಂದೆ ಒಂದೂವರೆ ವರ್ಷದ ಹುಲಿಮರಿಯನ್ನು ಸೆರೆ ಹಿಡಿಯಲಾಗಿದ್ದು ಮತ್ತೆ ಅದೇ ಜಾಗದಲ್ಲಿ ತಾಯಿ ಹುಲಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿತ್ತು. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಪ್ರತಿಭಟನೆಯನ್ನೂ ನಡೆಸಿದ್ದರು.
ಈಗ ಸೆರೆಯಾಗಿರುವ ಹುಲಿಯೊಂದಿಗೆ ಮತ್ತೊಂದು ಮರಿಯೂ ಇರುವ ಅನುಮಾನ ವ್ಯಕ್ತವಾಗಿದ್ದು ಅದನ್ನು ಹಿಡಿಯಲು ಅರಣ್ಯ ಇಲಾಖೆಯಿಂದ ಕಾರ್ಯಚರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಸೆರೆ ಹಿಡಿದ ಹುಲಿಯನ್ನು ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ಸಾಗಿಸಲಾಗಿದೆ ಎಂದು ವಲಯಾಧಿಕಾರಿ ಪುನೀತ್ ತಿಳಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…