ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ ಹೆಣ್ಣು ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ರಾತ್ರಿ ಸಾಕಾನೆಗಳು ಹಾಗೂ ಡ್ರೋನ್ ಕ್ಯಾಮರಾ ಸಹಾಯದಿಂದ ಸೆರೆ ಹಿಡಿದಿದ್ದಾರೆ.
ಸೆರೆಯಾಗಿರು ಹುಲಿಗೆ ಸುಮಾರು ಹನ್ನೊಂದು ವರ್ಷವಾಗಿದೆ ಎಂದು ಅಂದಾಜಿಸಲಾಗಿದೆ. ಹುಲಿ ಸೆರೆಗೆ ಆಗ್ರಹಿಸಿದ್ದ ಗ್ರಾಮಸ್ಥರು ಕಳೆದ ನಾಲ್ಕು ದಿನದ ಹಿಂದೆ ಒಂದೂವರೆ ವರ್ಷದ ಹುಲಿಮರಿಯನ್ನು ಸೆರೆ ಹಿಡಿಯಲಾಗಿದ್ದು ಮತ್ತೆ ಅದೇ ಜಾಗದಲ್ಲಿ ತಾಯಿ ಹುಲಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿತ್ತು. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಪ್ರತಿಭಟನೆಯನ್ನೂ ನಡೆಸಿದ್ದರು.
ಈಗ ಸೆರೆಯಾಗಿರುವ ಹುಲಿಯೊಂದಿಗೆ ಮತ್ತೊಂದು ಮರಿಯೂ ಇರುವ ಅನುಮಾನ ವ್ಯಕ್ತವಾಗಿದ್ದು ಅದನ್ನು ಹಿಡಿಯಲು ಅರಣ್ಯ ಇಲಾಖೆಯಿಂದ ಕಾರ್ಯಚರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಸೆರೆ ಹಿಡಿದ ಹುಲಿಯನ್ನು ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ಸಾಗಿಸಲಾಗಿದೆ ಎಂದು ವಲಯಾಧಿಕಾರಿ ಪುನೀತ್ ತಿಳಿಸಿದ್ದಾರೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…