ಗುಂಡ್ಲುಪೇಟೆ : ತಾಲ್ಲೂಕಿನ ಶಿವಪುರ ಗ್ರಾಮದ ಪೊನ್ನಸ್ವಾಮಿ ಎಂಬವರ ಹೊಲದಲ್ಲಿ ಕಟ್ಟಿಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ಮಾಡಿ ಕೊಂದು ತಿಂದಿರುವ ಘಟನೆ ನಡೆದಿದೆ.
ಶಿವಪುರ ಗ್ರಾಮದ ಪೊನ್ನಸ್ವಾಮಿ ಅವರು ಹೊಲದಲ್ಲಿ ದನಕರುವನ್ನು ಕಟ್ಟಿಹಾಕಿದ್ದರು. ಶುಕ್ರವಾರ ತಡರಾತ್ರಿ ಚಿರತೆ ದಾಳಿ ಮಾಡಿ ಒಂದು ವರ್ಷದ ಕರುವನ್ನು ಕೊಂದು, ಎಳೆದುಕೊಂಡು ಹೋಗಿ ತಿಂದಿದೆ. ಶನಿವಾರ ಬೆಳಿಗ್ಗೆ ಕರು ಕಾಣದಿದ್ದಾಗ ಹುಡುಕಾಡಿದ ಸಮಯದಲ್ಲಿ ಚಿರತೆ ತಿಂದುಹಾಕಿರುವುದು ಬೆಳಕಿಗೆ ಬಂದಿದೆ.
ಚಿರತೆ ದಾಳಿಯಿಂದಾಗಿ ಶಿವಪುರ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು, ರೈತರು, ಕೂಲಿಕಾರ್ಮಿಕರು ಕೃಷಿ ಕೆಲಸಕ್ಕೆಂದು ಹೊಲಗಳಿಗೆ ಹೋಗಿ ಬರಲು ಆತಂಕ ಪಡುತ್ತಿದ್ದಾರೆ. ದನಕರು ಮೇಯಿಸಲು ಕಾಡಿಗೆ ಹೋಗುವವರಿಗೂ ಭೀತಿ ಎದುರಾಗಿದೆ. ಶೀಘ್ರದಲ್ಲಿ ಅರಣ್ಯ ಇಲಾಖೆಯವರು ಚಿರತೆ ಸೆರೆಹಿಡಿದು ಆತಂಕ ನಿವಾರಿಸಬೇಕು ಎಂದು ರೈತ ಮುಖಂಡ ಕುಮಾರ್ ಹಾಗೂ ಸ್ಥಳೀಯರು ಮನವಿ ಮಾಡಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…