ಗುಂಡ್ಲುಪೇಟೆ : ತಾಲ್ಲೂಕಿನ ಶಿವಪುರ ಗ್ರಾಮದ ಪೊನ್ನಸ್ವಾಮಿ ಎಂಬವರ ಹೊಲದಲ್ಲಿ ಕಟ್ಟಿಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ಮಾಡಿ ಕೊಂದು ತಿಂದಿರುವ ಘಟನೆ ನಡೆದಿದೆ.
ಶಿವಪುರ ಗ್ರಾಮದ ಪೊನ್ನಸ್ವಾಮಿ ಅವರು ಹೊಲದಲ್ಲಿ ದನಕರುವನ್ನು ಕಟ್ಟಿಹಾಕಿದ್ದರು. ಶುಕ್ರವಾರ ತಡರಾತ್ರಿ ಚಿರತೆ ದಾಳಿ ಮಾಡಿ ಒಂದು ವರ್ಷದ ಕರುವನ್ನು ಕೊಂದು, ಎಳೆದುಕೊಂಡು ಹೋಗಿ ತಿಂದಿದೆ. ಶನಿವಾರ ಬೆಳಿಗ್ಗೆ ಕರು ಕಾಣದಿದ್ದಾಗ ಹುಡುಕಾಡಿದ ಸಮಯದಲ್ಲಿ ಚಿರತೆ ತಿಂದುಹಾಕಿರುವುದು ಬೆಳಕಿಗೆ ಬಂದಿದೆ.
ಚಿರತೆ ದಾಳಿಯಿಂದಾಗಿ ಶಿವಪುರ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು, ರೈತರು, ಕೂಲಿಕಾರ್ಮಿಕರು ಕೃಷಿ ಕೆಲಸಕ್ಕೆಂದು ಹೊಲಗಳಿಗೆ ಹೋಗಿ ಬರಲು ಆತಂಕ ಪಡುತ್ತಿದ್ದಾರೆ. ದನಕರು ಮೇಯಿಸಲು ಕಾಡಿಗೆ ಹೋಗುವವರಿಗೂ ಭೀತಿ ಎದುರಾಗಿದೆ. ಶೀಘ್ರದಲ್ಲಿ ಅರಣ್ಯ ಇಲಾಖೆಯವರು ಚಿರತೆ ಸೆರೆಹಿಡಿದು ಆತಂಕ ನಿವಾರಿಸಬೇಕು ಎಂದು ರೈತ ಮುಖಂಡ ಕುಮಾರ್ ಹಾಗೂ ಸ್ಥಳೀಯರು ಮನವಿ ಮಾಡಿದ್ದಾರೆ.
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…