ಗುಂಡ್ಲುಪೇಟೆ : ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಾಯಗೊಂಡಿರುವ ಘಟನೆ ಮೈಸೂರು – ಊಟಿ ರಾಷ್ಟ್ರೀಯ ಹೆದ್ದಾರಿಯ ಚಿಕ್ಕುಂಡಿ ಗೇಟ್ ಸಮೀಪ ಸೋಮವಾರ ನಡೆದಿದೆ.
ಗುಂಡ್ಲುಪೇಟೆ ಕಡೆಯಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮೈಸೂರಿನ ಕಡೆಗೆ ಶಿಫ್ಟ್ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿಗೆ ಬಂದ ಕೆಎಲ್ 09 ಎಹೆಚ್5778 ಸಂಖ್ಯೆಯ ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ಮನು ಹಾಗೂ ದೊರೆಸ್ವಾಮಿ ರವರಿಗೆ ತೀವ್ರ ಗಾಯವಾಗಿದ್ದು ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಗಾಯಾಳುಗಳು ಶಿವಮೊಗ್ಗ ಮೂಲದವರೆಂದು ತಿಳಿದುಬಂದಿದೆ.
ಅಪಘಾತದ ರಭಸಕ್ಕೆ ಪಕ್ಕದಲ್ಲಿ ನಿಂತಿದ್ದ ಅರೆಪುರ ಗ್ರಾಮದ ಬೈಕಿಗೂ ಸಹ ಗುದ್ದಿದ್ದು ಬೈಕ್ ಸಂಪೂರ್ಣವಾಗಿ ಜಖಂ ಆಗಿದೆ. ಈ ವೇಳೆ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟು ಪ್ರಕರಣ ದಾಖಲಿಸಿಕೊಂಡಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…