ಗುಂಡ್ಲುಪೇಟೆ: ದೇಶ ವಿಭಜನೆಯ ವಿವಾದಾತ್ಮಕ ಹೇಳಿಕೆ ನೀಡಿರುವ ಲೋಕಸಭಾ ಸದಸ್ಯ ಡಿ.ಕೆ ಸುರೇಶ್ ವಿರುದ್ಧ ಗುಂಡ್ಲುಪೇಟೆ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಸೋಮವಾರ ಡಿ.ಕೆ ಸುರೇಶ್ ಪ್ರತಿಕೃತಿ ದಯಿಸಿ ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಮಾತನಾಡಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಣಯ್, ದೇಶ ವಿಭಜನೆ ಎಂಬ ಪಿಡುಗು ಕಾಂಗ್ರೆಸ್ ಡಿಎನ್ಎ ದಲ್ಲೇ ಬಂದಿದೆ. ಸ್ವಾತಂತ್ರದ ದಿನದಿಂದಲೂ ದೇಶವನ್ನು ಹೊಡೆದು ಆಳುವ ನೀತಿಯನ್ನು ಕಾಂಗ್ರೆಸ್ ಮಾಡಿಕೊಂಡು ಬಂದಿದೆ.
ಇದರ ಮುಂದುವರೆದ ಭಾಗವಾಗಿ ಇಂದಿನ ಕಾಂಗ್ರೆಸ್ ನವರು ದೇಶ ಒಡೆಯುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಡಿ.ಕೆ ಸುರೇಶ್ ಅವರ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ನಾಯಕರುಗಳ ವರ್ತನೆಯು ಅದೇ ರೀತಿಯಾಗಿದೆ ಎಂದು ಕಿಡಿಕಾರಿದರು.
ಕೂಡಲೇ ಡಿ.ಕೆ ಸುರೇಶ್ ರವರನ್ನ ಸಂಸತ್ ಸದ್ಯಸ್ಯ ಸ್ಥಾನದಿಂದ ವಜಾ ಮಾಡಬೇಕೆಂದು ಪ್ರತಿಭಟನೆ ನಡಸುತ್ತಾ ಗುಂಡ್ಲುಪೇಟೆ ತಾಲೂಕು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ತೆರಳಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…