ಚಾಮರಾಜನಗರ

ಗುಂಡ್ಲುಪೇಟೆ: ಡಿಕೆ ಸುರೇಶ್‌ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಗುಂಡ್ಲುಪೇಟೆ: ದೇಶ ವಿಭಜನೆಯ ವಿವಾದಾತ್ಮಕ ಹೇಳಿಕೆ ನೀಡಿರುವ ಲೋಕಸಭಾ ಸದಸ್ಯ ಡಿ.ಕೆ ಸುರೇಶ್‌ ವಿರುದ್ಧ ಗುಂಡ್ಲುಪೇಟೆ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸೋಮವಾರ ಡಿ.ಕೆ ಸುರೇಶ್ ಪ್ರತಿಕೃತಿ ದಯಿಸಿ ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಣಯ್, ದೇಶ ವಿಭಜನೆ ಎಂಬ ಪಿಡುಗು ಕಾಂಗ್ರೆಸ್  ಡಿಎನ್ಎ ದಲ್ಲೇ ಬಂದಿದೆ. ಸ್ವಾತಂತ್ರದ ದಿನದಿಂದಲೂ ದೇಶವನ್ನು ಹೊಡೆದು ಆಳುವ ನೀತಿಯನ್ನು ಕಾಂಗ್ರೆಸ್ ಮಾಡಿಕೊಂಡು ಬಂದಿದೆ.

ಇದರ ಮುಂದುವರೆದ ಭಾಗವಾಗಿ ಇಂದಿನ ಕಾಂಗ್ರೆಸ್ ನವರು ದೇಶ ಒಡೆಯುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಡಿ.ಕೆ ಸುರೇಶ್ ಅವರ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ನಾಯಕರುಗಳ ವರ್ತನೆಯು ಅದೇ ರೀತಿಯಾಗಿದೆ ಎಂದು ಕಿಡಿಕಾರಿದರು.

ಕೂಡಲೇ ಡಿ.ಕೆ ಸುರೇಶ್ ರವರನ್ನ ಸಂಸತ್ ಸದ್ಯಸ್ಯ ಸ್ಥಾನದಿಂದ ವಜಾ ಮಾಡಬೇಕೆಂದು ಪ್ರತಿಭಟನೆ ನಡಸುತ್ತಾ ಗುಂಡ್ಲುಪೇಟೆ ತಾಲೂಕು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ತೆರಳಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

andolanait

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

3 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

5 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

13 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

15 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

16 hours ago