ಚಾಮರಾಜನಗರ

ಗುಂಡ್ಲುಪೇಟೆ: ಕೊಡಸೋಗೆ ಜೆಎಸ್‌ಎಸ್‌ ಪ್ರೌಢಶಾಲೆಯಲ್ಲಿ ರಾಜೇಂದ್ರ ಶ್ರೀಗಳವರ ನುಡಿನಮನ ಕಾರ್ಯಕ್ರಮ

ಗುಂಡ್ಲುಪೇಟೆ: ತಾಲ್ಲೂಕಿನ ಕೊಡಸೋಗೆ ಗ್ರಾಮದ ಜೆಎಸ್‌ಎಸ್‌ ಪ್ರೌಢಶಾಲೆಯಲ್ಲಿ ರಾಜೇಂದ್ರ ಶ್ರೀಗಳವರ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ರಾಜೇಂದ್ರ ಶ್ರೀಗಳ ಭಾವಚಿತ್ರಕ್ಕೆ ಅತಿಥಿ ಗಣ್ಯರು, ಮುಖ್ಯ ಶಿಕ್ಷಕರು, ಗ್ರಾಮದ ಮುಖಂಡರು ಪುಷ್ಪ ನಮನವನ್ನು ಸಲ್ಲಿಸಿದ ನಂತರ ಸುತ್ತೂರಿನ ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಶಿಕ್ಷಕ, ಹವ್ಯಾಸಿ ಬರಹಗಾರ ಎನ್.ಪಿ.ಪರಶಿವಮೂರ್ತಿ ಅವರು ಮಾತನಾಡಿ “ಸಮಾಜದ ಅಭ್ಯುದಯಕ್ಕಾಗಿ ಶ್ರೀಗಂಧದ ಕೊರಡಿನಂತೆ ತೇಯ್ದವರು” ರಾಜೇಂದ್ರ ಶ್ರೀಗಳು.

ಶ್ರೀಗಳವರು ಲೋಕ ಕಾರುಣ್ಯದ ನಿಧಿ, ಸುರಧೇನು. ಮಾತೃ ಹೃದಯಿಗಳು, ಉದಾರತೆಯ ಗಣಿ, ಸರಳತೆಯ ಸಾಕಾರಮೂರ್ತಿ, ಕಾವಿಗೆ ಗೌರವವನ್ನು ತಂದು ಕೊಟ್ಟವರು. ಘಟದಿಂದ ಮಠವೇ ಹೊರತು ಮಠದಿಂದ ಘಟವಲ್ಲ ಎಂಬುದನ್ನು ಅಕ್ಷರಶಃ ಸಾಧಿಸಿ ತೋರಿಸಿದವರು. ಅಂದು ತ್ರಿವಿಧ ದಾಸೋಹದಲ್ಲಿ ಮಾಡಿದಂತಹ ಸಾಧನೆಯಿಂದ ಇಂದು ಲಕ್ಷಾಂತರ ವಿದ್ಯಾರ್ಥಿಗಳ ಮನೆ ಮನಗಳಲ್ಲಿ ದಿವ್ಯ ಜ್ಯೋತಿಯಾಗಿ ಬೆಳಗುತ್ತಿದ್ದಾರೆ. ಅವರು ಅಂದು ನೆಟ್ಟಂತಹ ತ್ರಿವಿಧ ದಾಸೋಹದ (ಅನ್ನ, ಅಕ್ಷರ, ಆಶ್ರಯ) ಬೀಜ ಇಂದು ಹೆಮ್ಮರವಾಗಿ ವಿಶ್ವದಾದ್ಯಂತ ಪಸರಿಸಿ ಅದರ ನೆರಳಿನಲ್ಲಿ ಬದುಕನ್ನು ಕಟ್ಟಿಕೊಂಡಿದ್ದಾರೆ. ಹಾಗೆಯೇ ಸಂಸ್ಥೆ ಮತ್ತು ಮಠವನ್ನು ಬೆಳೆಸುವುದರ ಜೊತೆ ಜೊತೆಗೆ ಸಮಾಜಕ್ಕೆ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ, ಶಿಕ್ಷಣ ಕ್ಷೇತ್ರಕ್ಕೆ ಅನನ್ಯ ಕೊಡುಗೆಯನ್ನು ನೀಡಿದ್ದಾರೆ. ಇಂದು ಜೆಎಸ್ಎಸ್ ಸಂಸ್ಥೆಗಳಲ್ಲಿ ಲಕ್ಷೋಪಲಕ್ಷ ವಿದ್ಯಾರ್ಥಿಗಳು ಜ್ಞಾನಾರ್ಜನೆಯನ್ನು ಪಡೆದುಕೊಳ್ಳುತ್ತಿದ್ದಾರೆ. “ಪರೋಪಕಾರಂ ಇದಂ ಶರೀರಂ” ಎಂಬ ದೈವ ನುಡಿಯಂತೆ ಸಮಾಜದಿಂದ ತಂದು ಸಮಾಜದ ಉನ್ನತಿಗಾಗಿ ನಿಸ್ವಾರ್ಥದಿಂದ ಧಾರೆಯೆರೆದವರು. ಎಲ್ಲಾ ಸಮಾಜದ ಅನಾಥ, ನಿರ್ಗತಿಕರ, ಆರ್ಥಿಕವಾಗಿ ಹಿಂದುಳಿದವರ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದವರು ರಾಜೇಂದ್ರ ಶ್ರೀಗಳವರು. ಇಂದು ಜೆಎಸ್ಎಸ್ ಸಂಸ್ಥೆಗಳು ರಾಜ್ಯವಲ್ಲದೆ, ಹೊರ ರಾಜ್ಯಗಳು, ವಿದೇಶಗಳಲ್ಲಿ ಹಾಗೂ ಜಗದಗಲ ಮುಗಿಲೆತ್ತರಕ್ಕೆ ಸೇವೆಯನ್ನು ಸಲ್ಲಿಸುತ್ತಿರುವುದರ ಹಿಂದೆ ಶ್ರೀಗಳವರ ಕಾಯಕ ನಿಷ್ಠೆ, ನಿಸ್ವಾರ್ಥ ಸೇವೆ, ಆಚಲವಾದ ನಂಬಿಕೆ, ದೂರದರ್ಶಿತ್ವದ ಚಿಂತನೆ, ಸಾಮಾಜಿಕ ಕಳಕಳಿಯನ್ನು ಅಲ್ಲಗಳೆಯುವಂತಿಲ್ಲ. ಉರಿಯುಂಡ ಕರ್ಪೂರದಂತೆ ಪರಿಮಳವನ್ನು ಸಮಾಜಕ್ಕೆ ನೀಡಿದವರು ರಾಜೇಂದ್ರ ಶ್ರೀಗಳೆಂದು ನುಡಿದರು.

ಮುಖ್ಯ ಅತಿಥಿಗಳಾದ ಕೆ.ಎಂ.ಬಸವಣ್ಣ ಅವರು ಮಾತನಾಡಿ, ಸುತ್ತೂರು ಮಠಕ್ಕೂ ಗುಂಡ್ಲುಪೇಟೆ ತಾಲ್ಲೂಕಿಗೂ ಅವಿನಾಭಾವ ಸಂಬಂಧವಿದೆ. ರಾಜೇಂದ್ರ ಶ್ರೀಗಳವರು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವನ್ನು ಬೊಮ್ಮಲಾಪುರದ ಪೂಜ್ಯ ಶ್ರೀ ಶಿವಕುಮಾರ ಸ್ವಾಮಿಗಳು ವಹಿಸಿದ್ದರು. ಮುಖ್ಯ ಶಿಕ್ಷಕರಾದ ರವಿಕುಮಾರ್ ಟಿ.ಎನ್, ನೌಕರ ವೃಂದ, ಕೊಡಸೋಗೆ ಕೆ.ಎಂ ಬಸವಣ್ಣನವರು ಅ.ಭಾ.ವೀ.ಮಹಾಸಭಾ ಜಿಲ್ಲಾ ಅಧ್ಯಕ್ಷರು ಚಾಮರಾಜನಗರ. ಕೊಡಸೋಗೆ ಗ್ರಾಮದ ಮುಖಂಡರಾದ ಎಂ.ನಾಗಮಲ್ಲಪ್ಪ, ಕೆ.ಎಲ್ ಮಹದೇವಸ್ವಾಮಿ, ರಮೇಶ್, ಜಯಚಂದ್ರ, ಪೋಷಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ನಂತರ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

1 hour ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

2 hours ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

2 hours ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

2 hours ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

3 hours ago