ಚಾಮರಾಜನಗರ

ಗುಂಡ್ಲುಪೇಟೆ: ಕೊಡಸೋಗೆ ಜೆಎಸ್‌ಎಸ್‌ ಪ್ರೌಢಶಾಲೆಯಲ್ಲಿ ರಾಜೇಂದ್ರ ಶ್ರೀಗಳವರ ನುಡಿನಮನ ಕಾರ್ಯಕ್ರಮ

ಗುಂಡ್ಲುಪೇಟೆ: ತಾಲ್ಲೂಕಿನ ಕೊಡಸೋಗೆ ಗ್ರಾಮದ ಜೆಎಸ್‌ಎಸ್‌ ಪ್ರೌಢಶಾಲೆಯಲ್ಲಿ ರಾಜೇಂದ್ರ ಶ್ರೀಗಳವರ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ರಾಜೇಂದ್ರ ಶ್ರೀಗಳ ಭಾವಚಿತ್ರಕ್ಕೆ ಅತಿಥಿ ಗಣ್ಯರು, ಮುಖ್ಯ ಶಿಕ್ಷಕರು, ಗ್ರಾಮದ ಮುಖಂಡರು ಪುಷ್ಪ ನಮನವನ್ನು ಸಲ್ಲಿಸಿದ ನಂತರ ಸುತ್ತೂರಿನ ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಶಿಕ್ಷಕ, ಹವ್ಯಾಸಿ ಬರಹಗಾರ ಎನ್.ಪಿ.ಪರಶಿವಮೂರ್ತಿ ಅವರು ಮಾತನಾಡಿ “ಸಮಾಜದ ಅಭ್ಯುದಯಕ್ಕಾಗಿ ಶ್ರೀಗಂಧದ ಕೊರಡಿನಂತೆ ತೇಯ್ದವರು” ರಾಜೇಂದ್ರ ಶ್ರೀಗಳು.

ಶ್ರೀಗಳವರು ಲೋಕ ಕಾರುಣ್ಯದ ನಿಧಿ, ಸುರಧೇನು. ಮಾತೃ ಹೃದಯಿಗಳು, ಉದಾರತೆಯ ಗಣಿ, ಸರಳತೆಯ ಸಾಕಾರಮೂರ್ತಿ, ಕಾವಿಗೆ ಗೌರವವನ್ನು ತಂದು ಕೊಟ್ಟವರು. ಘಟದಿಂದ ಮಠವೇ ಹೊರತು ಮಠದಿಂದ ಘಟವಲ್ಲ ಎಂಬುದನ್ನು ಅಕ್ಷರಶಃ ಸಾಧಿಸಿ ತೋರಿಸಿದವರು. ಅಂದು ತ್ರಿವಿಧ ದಾಸೋಹದಲ್ಲಿ ಮಾಡಿದಂತಹ ಸಾಧನೆಯಿಂದ ಇಂದು ಲಕ್ಷಾಂತರ ವಿದ್ಯಾರ್ಥಿಗಳ ಮನೆ ಮನಗಳಲ್ಲಿ ದಿವ್ಯ ಜ್ಯೋತಿಯಾಗಿ ಬೆಳಗುತ್ತಿದ್ದಾರೆ. ಅವರು ಅಂದು ನೆಟ್ಟಂತಹ ತ್ರಿವಿಧ ದಾಸೋಹದ (ಅನ್ನ, ಅಕ್ಷರ, ಆಶ್ರಯ) ಬೀಜ ಇಂದು ಹೆಮ್ಮರವಾಗಿ ವಿಶ್ವದಾದ್ಯಂತ ಪಸರಿಸಿ ಅದರ ನೆರಳಿನಲ್ಲಿ ಬದುಕನ್ನು ಕಟ್ಟಿಕೊಂಡಿದ್ದಾರೆ. ಹಾಗೆಯೇ ಸಂಸ್ಥೆ ಮತ್ತು ಮಠವನ್ನು ಬೆಳೆಸುವುದರ ಜೊತೆ ಜೊತೆಗೆ ಸಮಾಜಕ್ಕೆ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ, ಶಿಕ್ಷಣ ಕ್ಷೇತ್ರಕ್ಕೆ ಅನನ್ಯ ಕೊಡುಗೆಯನ್ನು ನೀಡಿದ್ದಾರೆ. ಇಂದು ಜೆಎಸ್ಎಸ್ ಸಂಸ್ಥೆಗಳಲ್ಲಿ ಲಕ್ಷೋಪಲಕ್ಷ ವಿದ್ಯಾರ್ಥಿಗಳು ಜ್ಞಾನಾರ್ಜನೆಯನ್ನು ಪಡೆದುಕೊಳ್ಳುತ್ತಿದ್ದಾರೆ. “ಪರೋಪಕಾರಂ ಇದಂ ಶರೀರಂ” ಎಂಬ ದೈವ ನುಡಿಯಂತೆ ಸಮಾಜದಿಂದ ತಂದು ಸಮಾಜದ ಉನ್ನತಿಗಾಗಿ ನಿಸ್ವಾರ್ಥದಿಂದ ಧಾರೆಯೆರೆದವರು. ಎಲ್ಲಾ ಸಮಾಜದ ಅನಾಥ, ನಿರ್ಗತಿಕರ, ಆರ್ಥಿಕವಾಗಿ ಹಿಂದುಳಿದವರ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದವರು ರಾಜೇಂದ್ರ ಶ್ರೀಗಳವರು. ಇಂದು ಜೆಎಸ್ಎಸ್ ಸಂಸ್ಥೆಗಳು ರಾಜ್ಯವಲ್ಲದೆ, ಹೊರ ರಾಜ್ಯಗಳು, ವಿದೇಶಗಳಲ್ಲಿ ಹಾಗೂ ಜಗದಗಲ ಮುಗಿಲೆತ್ತರಕ್ಕೆ ಸೇವೆಯನ್ನು ಸಲ್ಲಿಸುತ್ತಿರುವುದರ ಹಿಂದೆ ಶ್ರೀಗಳವರ ಕಾಯಕ ನಿಷ್ಠೆ, ನಿಸ್ವಾರ್ಥ ಸೇವೆ, ಆಚಲವಾದ ನಂಬಿಕೆ, ದೂರದರ್ಶಿತ್ವದ ಚಿಂತನೆ, ಸಾಮಾಜಿಕ ಕಳಕಳಿಯನ್ನು ಅಲ್ಲಗಳೆಯುವಂತಿಲ್ಲ. ಉರಿಯುಂಡ ಕರ್ಪೂರದಂತೆ ಪರಿಮಳವನ್ನು ಸಮಾಜಕ್ಕೆ ನೀಡಿದವರು ರಾಜೇಂದ್ರ ಶ್ರೀಗಳೆಂದು ನುಡಿದರು.

ಮುಖ್ಯ ಅತಿಥಿಗಳಾದ ಕೆ.ಎಂ.ಬಸವಣ್ಣ ಅವರು ಮಾತನಾಡಿ, ಸುತ್ತೂರು ಮಠಕ್ಕೂ ಗುಂಡ್ಲುಪೇಟೆ ತಾಲ್ಲೂಕಿಗೂ ಅವಿನಾಭಾವ ಸಂಬಂಧವಿದೆ. ರಾಜೇಂದ್ರ ಶ್ರೀಗಳವರು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವನ್ನು ಬೊಮ್ಮಲಾಪುರದ ಪೂಜ್ಯ ಶ್ರೀ ಶಿವಕುಮಾರ ಸ್ವಾಮಿಗಳು ವಹಿಸಿದ್ದರು. ಮುಖ್ಯ ಶಿಕ್ಷಕರಾದ ರವಿಕುಮಾರ್ ಟಿ.ಎನ್, ನೌಕರ ವೃಂದ, ಕೊಡಸೋಗೆ ಕೆ.ಎಂ ಬಸವಣ್ಣನವರು ಅ.ಭಾ.ವೀ.ಮಹಾಸಭಾ ಜಿಲ್ಲಾ ಅಧ್ಯಕ್ಷರು ಚಾಮರಾಜನಗರ. ಕೊಡಸೋಗೆ ಗ್ರಾಮದ ಮುಖಂಡರಾದ ಎಂ.ನಾಗಮಲ್ಲಪ್ಪ, ಕೆ.ಎಲ್ ಮಹದೇವಸ್ವಾಮಿ, ರಮೇಶ್, ಜಯಚಂದ್ರ, ಪೋಷಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ನಂತರ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

2 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

2 hours ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

4 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

5 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

6 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

9 hours ago