ಚಾಮರಾಜನಗರ

ಗುಂಡ್ಲುಪೇಟೆ | ರಸ್ತೆ ಅಪಘಾತ ; ಒಂದೇ ಕುಟುಂಬದ ಮೂವರು ಸಾವು

ಗುಂಡ್ಲುಪೇಟೆ : ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ತಾಲ್ಲೂಕಿನ ಹಿರೀಕಾಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ನಡೆದಿದೆ.

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಗ್ರಾಮದ ಶಶಿಧರ್ ಹಾಗೂ ಇವರ ಪತ್ನಿ ಶಾಲಿನಿ, ತಾಯಿ ಭಾಗ್ಯಮ್ಮ ಮೃತಪಟ್ಟಿರುವವರು.

ಮಂಗಳವಾರ ಶಶಿಧರ್ ಪತ್ನಿ ಹಾಗೂ ತಾಯಿ ಜೊತೆ ಬೈಕ್ ನಲ್ಲಿ ಎಚ್. ಡಿ.ಕೋಟೆ ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟಕ್ಕೆ ತೆರಳಿದ್ದರು. ಸಂಜೆ ವಾಪಸ್ ಗುಂಡ್ಲುಪೇಟೆ- ಮೈಸೂರು ಹೆದ್ದಾರಿ ಮಾರ್ಗವಾಗಿ ಕೂಡ್ಲಾಪುರಕ್ಕೆ ಬರುತ್ತಿದ್ದರು. ಹಿರೀಕಾಟಿ ಬಸ್ ನಿಲ್ದಾಣದ ಬಳಿ ಬೈಕ್ ಬರುತ್ತಿದ್ದಂತೆ ರಾತ್ರಿ 7.30 ಗಂಟೆ ಸಮಯದಲ್ಲಿ ನಂಜನಗೂಡು ಕಡೆಯಿಂದ ಬಂದಂತಹ ಕಾರು ಡಿಕ್ಕಿ ಹೊಡೆದಿದೆ. ಬೈಕ್ ಓಡಿಸುತ್ತಿದ್ದ ಶಶಿಧರ್, ಹಿಂಬದಿಯಲ್ಲಿ ಕುಳಿತಿದ್ದ ಪತ್ನಿ ಶಾಲಿನಿ, ತಾಯಿ ಭಾಗ್ಯಮ್ಮ ನೆಲಕ್ಕೆ ಬಿದ್ದರು. ತೀವ್ರವಾಗಿ ಗಾಯಗೊಂಡು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು.

ವಿಷಯ ತಿಳಿದು ಸ್ಥಳಕ್ಕೆ ಬೇಗೂರು ಪೊಲೀಸ್ ಠಾಣೆ ಎಸ್ .ಐ. ಚರಣ್ ಗೌಡ ಹಾಗೂ ಸಿಬ್ಬಂದಿ ಪರಿಶೀಲಿಸಿದರು. ಬಳಿಕ ಶವಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸಿದರು. ಕಾರನ್ನು ವಶಕ್ಕೆ ಪಡೆದಿದ್ದು, ಚಾಲಕ ನಾಪತ್ತೆಯಾಗಿದ್ದಾನೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

1 hour ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

15 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

17 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

18 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

18 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

18 hours ago