ಗುಂಡ್ಲುಪೇಟೆ : ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ತಾಲ್ಲೂಕಿನ ಹಿರೀಕಾಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಗ್ರಾಮದ ಶಶಿಧರ್ ಹಾಗೂ ಇವರ ಪತ್ನಿ ಶಾಲಿನಿ, ತಾಯಿ ಭಾಗ್ಯಮ್ಮ ಮೃತಪಟ್ಟಿರುವವರು.
ಮಂಗಳವಾರ ಶಶಿಧರ್ ಪತ್ನಿ ಹಾಗೂ ತಾಯಿ ಜೊತೆ ಬೈಕ್ ನಲ್ಲಿ ಎಚ್. ಡಿ.ಕೋಟೆ ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟಕ್ಕೆ ತೆರಳಿದ್ದರು. ಸಂಜೆ ವಾಪಸ್ ಗುಂಡ್ಲುಪೇಟೆ- ಮೈಸೂರು ಹೆದ್ದಾರಿ ಮಾರ್ಗವಾಗಿ ಕೂಡ್ಲಾಪುರಕ್ಕೆ ಬರುತ್ತಿದ್ದರು. ಹಿರೀಕಾಟಿ ಬಸ್ ನಿಲ್ದಾಣದ ಬಳಿ ಬೈಕ್ ಬರುತ್ತಿದ್ದಂತೆ ರಾತ್ರಿ 7.30 ಗಂಟೆ ಸಮಯದಲ್ಲಿ ನಂಜನಗೂಡು ಕಡೆಯಿಂದ ಬಂದಂತಹ ಕಾರು ಡಿಕ್ಕಿ ಹೊಡೆದಿದೆ. ಬೈಕ್ ಓಡಿಸುತ್ತಿದ್ದ ಶಶಿಧರ್, ಹಿಂಬದಿಯಲ್ಲಿ ಕುಳಿತಿದ್ದ ಪತ್ನಿ ಶಾಲಿನಿ, ತಾಯಿ ಭಾಗ್ಯಮ್ಮ ನೆಲಕ್ಕೆ ಬಿದ್ದರು. ತೀವ್ರವಾಗಿ ಗಾಯಗೊಂಡು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು.
ವಿಷಯ ತಿಳಿದು ಸ್ಥಳಕ್ಕೆ ಬೇಗೂರು ಪೊಲೀಸ್ ಠಾಣೆ ಎಸ್ .ಐ. ಚರಣ್ ಗೌಡ ಹಾಗೂ ಸಿಬ್ಬಂದಿ ಪರಿಶೀಲಿಸಿದರು. ಬಳಿಕ ಶವಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸಿದರು. ಕಾರನ್ನು ವಶಕ್ಕೆ ಪಡೆದಿದ್ದು, ಚಾಲಕ ನಾಪತ್ತೆಯಾಗಿದ್ದಾನೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…