Mysore
15
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಗುಂಡ್ಲುಪೇಟೆ | 4 ಕರು ಕೊಂದಿದ್ದ ಚಿರತೆ ಕೊನೆಗೂ ಸೆರೆ

ಗುಂಡ್ಲುಪೇಟೆ : ಒಂದೇ ದಿನ 4 ಕರುಗಳನ್ನು ಕೊಂದು ಹಾಕಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.

ಹೊಂಗಹಳ್ಳಿ ಗ್ರಾಮದ ನಾಗಪ್ಪ ಎಂಬವರ ಜಮೀನಿನಲ್ಲಿ ಇರಿಸಲಾಗಿದ್ದ ಕೊಟ್ಟಿಗೆ ಮಾದರಿ ಬೋನಿಗೆ ಅಂದಾಜು 4 ವರ್ಷದ ಚಿರತೆ ಸೆರೆಯಾಗಿದೆ. ಕಳೆದ 15 ದಿನಗಳ ಹಿಂದೆಯಷ್ಟೇ ನಾಗಪ್ಪ ಎಂಬುವವರಿಗೆ ಸೇರಿದ 4 ಕರುಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿ ಅದರಲ್ಲಿ ಒಂದನ್ನು ಹೊತ್ತೊಯ್ದಿತ್ತು. ಘಟನೆ ಬಳಿಕ ಚಿರತೆ ಸೆರೆಗೆ ಮದ್ದೂರು ವಲಯ ಅರಣ್ಯಾಧಿಕಾರಿಗಳು ಬೋನಿರಿಸಿದ್ದರು.

Tags:
error: Content is protected !!