ಚಾಮರಾಜನಗರ

ಗುಂಡ್ಲುಪೇಟೆ| ಕಾಡಂಚಿನ ಗ್ರಾಮಗಳಲ್ಲಿ ನಿಲ್ಲದ ಕಾಡು ಪ್ರಾಣಿಗಳ ಉಪಟಳ

ಗುಂಡ್ಲುಪೇಟೆ: ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು, ರೈತರು ಬೆಳೆದ ಬೆಳೆಗಳನ್ನು ನಾಶಪಡಿಸಿವೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಓಂಕಾರ ಅರಣ್ಯ ವಲಯದ ಆಸುಪಾಸಿನ ಗ್ರಾಮಗಳಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು, ದಿನನಿತ್ಯ ಸಂಜೆಯಾದರೆ ಸಾಕು ಮನೆಯಿಂದ ಹೊರಬರಲು ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾಡಂಚಿನ ಗ್ರಾಮಗಳಾದ ಮಂಚಹಳ್ಳಿ, ಆಲತ್ತೂರು, ಶಿವಕುಮಾರಪುರದಲ್ಲಿ ಆನೆಗಳು, ಕಾಡುಹಂದಿ ಹಾಗೂ ಜಿಂಕೆಗಳು ಭಾರೀ ಉಪಟಳ ನೀಡುತ್ತಿದ್ದು, ರೈತರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಕಾಡಂಚಿನಲ್ಲಿ ಸೋಲಾರ್‌ ಪೆನ್ಸ್‌ ಇದ್ದು ಇಲ್ಲದಂತಾಗಿದ್ದು, ಸಂಜೆಯ ವೇಳೆಗೆ ಕಾಡಾನೆಗಳು ಕಂದಕವನ್ನು ದಾಟಿ ರೈತರ ಜಮೀನುಗಳಿಗೆ ಲಗ್ಗೆ ಇಡುತ್ತಿವೆ. ಬೆಳೆ ರಕ್ಷಣೆಗೆಂದು ರೈತರು ಪ್ರಾಣವನ್ನೂ ಲೆಕ್ಕಿಸದೆ ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ತಡೆಗಟ್ಟಲು ಸರ್ಕಾರ ಕ್ರಮ ವಹಿಸಬೇಕು ಎಂದು ಈ ಭಾಗದ ರೈತರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

35 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

37 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

39 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

41 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

49 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

56 mins ago